AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: May 04, 2026 | 3:59 PM

Share

ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರ ಭರ್ಜರಿ ಗೆಲುವಿನ ಕುರಿತು ಸಚಿವ ಆರ್. ಬಿ. ತಿಮ್ಮಾಪುರ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮೂಹಿಕ ಶ್ರಮ, ಸಿದ್ದರಾಮಯ್ಯರ ಅಭಿವೃದ್ಧಿ ಕಾರ್ಯಗಳು, ಡಿಕೆ ಶಿವಕುಮಾರ್ ಸಂಘಟನೆ, ಗ್ಯಾರಂಟಿ ಯೋಜನೆಗಳು ಮತ್ತು ಉಮೇಶ್ ಮೇಟಿ ಅವರ ವ್ಯಕ್ತಿತ್ವವೇ ಗೆಲುವಿಗೆ ಪ್ರಮುಖ ಕಾರಣ ಎಂದು ಅವರು ಹೇಳಿದರು. ಬಿಜೆಪಿ ಹಿಂದುತ್ವದ ತಂತ್ರ ಫಲ ನೀಡಲಿಲ್ಲ ಎಂದರು.

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ, ಹಿಂದೂ ಎಂದು ಭಾಷಣ ಮಾಡುತ್ತಿದ್ದರು. ನಾವು, ಉಮೇಶ್ ಮೇಟಿ ಹಿಂದೂ ಅಲ್ಲವಾ ಎಂದು ಪ್ರಚಾರ ಮಾಡಿದ್ದೇವು. ಎಲ್ಲರ ಶ್ರಮದಿಂದ ಕಾಂಗ್ರೆಸ್ ಗೆದ್ದಿದೆ. ನಮ್ಮ ಸರಕಾರದ ಅಭಿವೃದ್ಧಿ ಕಾರ್ಯ ಗ್ಯಾರಂಟಿಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಬಿಜೆಪಿಯವರನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂಬುದಕ್ಕೆ ಈ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More