V Somanna: ವಸತಿ ಬಡಾವಣೆ ಉದ್ಘಾಟಿಸಿ ಡಿಕೆ ಶಿವಕುಮಾರ್ ಕುಟುಂಬದ ಗುಣಗಾನ ಮಾಡಿದ ಸಚಿವ ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Mar 07, 2023 | 6:55 PM

ಇಂದು ರಾಮಮಗರ ಜಿಲ್ಲೆಯ ರಾಯಸಂದ್ರ ಬಳಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಸಂಯುಕ್ತ ಬಡಾವಣೆಯ ಪ್ರವೇಶ ದ್ವಾರವನ್ನು ಸಂಸದ ಡಿಕೆ ಸುರೇಶ್ ಜೊತೆಗೂಡಿ ಉದ್ಘಾಟಿಸಿದ ಸಚಿವ ವಿ ಸೋಮಣ್ಣ ಡಿಕೆ ಶಿವಕುಮಾರ್ ಕುಟುಂಬದ ಬಗ್ಗೆ ಬಹಳ ಅಭಿಮಾನದಿಂದ ಮಾತಾಡಿದರು.

ರಾಮನಗರ: ವಸತಿ ಇಲಾಖೆ ಸಚಿವ ವಿ ಸೋಮಣ್ಣ ಮತ್ತು ಡಿಕೆ ಶಿವಕುಮಾರ್ ನಡುವಿನ ಸ್ನೇಹ ದಿನದಿಂದ ಗಾಢವಾಗುತ್ತಾ ಸಾಗಿದೆ ಅದರೆ ಸಚಿವರು ಮಾತ್ರ ಕಾಂಗ್ರೆಸ್ ಪಕ್ಷ ಸೇರುವ ವದಂತಿಯ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಇಂದು ರಾಮಮಗರ ಜಿಲ್ಲೆಯ ರಾಯಸಂದ್ರ ಬಳಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಸಂಯುಕ್ತ ಬಡಾವಣೆಯ ಪ್ರವೇಶ ದ್ವಾರವನ್ನು ಸಂಸದ ಡಿಕೆ ಸುರೇಶ್ ಜೊತೆಗೂಡಿ ಉದ್ಘಾಟಿಸಿದ ಸಚಿವರು ಶಿವಕುಮಾರ್ ಕುಟುಂಬದ ಬಗ್ಗೆ ಬಹಳ ಅಭಿಮಾನದಿಂದ ಮಾತಾಡಿದರು. ಅವರ ಉದ್ದೇಶ ಅರ್ಥಮಾಡಿಕೊಳ್ಳವುದು ಮಾತ್ರ ಮಾಧ್ಯಮಗಳಿಗೆ ಸಾಧ್ಯವಾಗುತ್ತಿಲ್ಲ. ನಿನ್ನೆ ಅವರು, ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಅಂತ ಯಾವತ್ತೂ ಹೇಳಿಲ್ಲ ಎಂದು ಹೇಳಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 06:27 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.