ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್​, ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ ಎಂದಿದ್ದಾರೆ. ಆ ಮೂಲಕ ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಎಚ್ಚೆತ್ತುಕೊಂಡಿದ್ದಾರೆ.

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2024 | 7:17 PM

ಬೆಂಗಳೂರು, ಸೆಪ್ಟೆಂಬರ್ 26: ಕೋರ್ಟ್​ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್​ (Zameer Ahmed Khan) ಮಾತನಾಡಿದ್ದಕ್ಕೆ ವಿಪಕ್ಷ ಮಾತ್ರವಲ್ಲ ಸ್ವಪಕ್ಷದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಜಮೀರ್ ಹೇಳಿಕೆ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸುದ್ದಿಗೋಷ್ಠಿ ಕರೆದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ. ಪೊಲಿಟಿಕಲ್ ಜಡ್ಜ್‌ಮೆಂಟ್‌ ಅಂತಾ ನಾನು ಹೇಳಿಲ್ಲ ಎಂದಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಕೊಡಬಾರದು ಅಂತ ಕೇಳಿದ್ದೇವೆ. ಕೇವಲ ತನಿಖೆಗೆ ಕೊಟ್ಟಿದ್ದಾರೆ, ಅದು ನಮಗೆ ಒಂದು ರೀತಿಯ ಜಯ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ