ಕರ್ನಾಟಕ ಸರ್ಕಾರದ ಉಚಿತ ಯೋಜನೆಗಳ ಪ್ರವರವನ್ನು ಹಂಪಿ ಉತ್ಸವದಲ್ಲೂ ಮುಂದುವರಿಸಿದ ಸಚಿವ ಜಮೀರ್ ಅಹ್ಮದ್ ಖಾನ್!

ಕಳೆದ ಬಾರ ನಡೆದ ಹಂಪಿ ಉತ್ಸವ ಮಾಜಿ ಸಚಿವ ಆನಂದ್ ಸಿಂಗ್ ಅವರ ನೇತೃತ್ವದಲ್ಲಿ ನಡೆದಿತ್ತು ಮತ್ತು ಆಗ ತಲೆದೋರಿದ್ದ ಸಮಸ್ಯೆಗಳನ್ನು ಉಲ್ಲೇಖಿಸಿದ ಸಚಿವ ಜಮೀರ್ ನಯವಾಗಿ ಮಾಜಿ ಸಚಿವನ ಕಾಲೆಳೆದರು. ವಾಹನಗಳ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎದುರಾಗಿದ್ದ ಅಡಚಣೆಗಳ ಬಗ್ಗೆ ಸಚಿವ ಮಾತಾಡಿದರು.

ಕರ್ನಾಟಕ ಸರ್ಕಾರದ ಉಚಿತ ಯೋಜನೆಗಳ ಪ್ರವರವನ್ನು ಹಂಪಿ ಉತ್ಸವದಲ್ಲೂ ಮುಂದುವರಿಸಿದ ಸಚಿವ ಜಮೀರ್ ಅಹ್ಮದ್ ಖಾನ್!
|

Updated on: Feb 05, 2024 | 11:00 AM

ವಿಜಯನಗರ: ಕರ್ನಾಟಕ ರಾಜ್ಯ ಸರ್ಕಾರ (Karnataka government) ತನ್ನ ಉದಾರ ನೀತಿ ಪ್ರದರ್ಶಿಸುವುದನ್ನು ಮುಂದುವರಿಸಿದೆ. ವಸತಿ ಖಾತೆ ಸಚಿವ ಮತ್ತು ಹಂಪಿ ಉತ್ಸವದ ಉಸ್ತುವಾರಿ ಕೂಡ ಆಗಿದ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ತಮ್ಮ ವತಿಯಿಂದಲೂ ಔದಾರ್ಯತೆಯನ್ನು ಪ್ರದರ್ಶಿಸಿದರು. ಹಂಪಿ ಉತ್ಸವದ (Hampi Utsav) ಸಂದರ್ಭದಲ್ಲಿ ಊಟದ ಸ್ವಾಲ್ ಗಳನ್ನು ಹಾಕಿದವರು ಜಮೀರ್ ಅವರ ಆಗ್ರಹದ ಮೇರೆಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಬಂದವರಿಗೆ ಕಡಿಮೆ ದರದಲ್ಲಿ ಊಟ ನೀಡಿದ ಕಾರಣ ಅವರೆಲ್ಲ ನಷ್ಟ ಅನುಭವಿಸಬೇಕಾಗಿದೆಯಂತೆ. ಅದನ್ನವರು ಜಮೀರ್ ಬಳಿ ಹೇಳಿಕೊಂಡಿದ್ದು ಸಚಿವ ವೇದಿಕೆಯ ಮೇಲೆ ಭಾಷಣ ಮಾಡುವಾಗ, ಊಟದ ಸ್ಟಾಲ್ ಗಳನ್ನು ಹಾಕಿದವರು ಬಾಡಿಗೆ ಕಟ್ಟಬೇಕಿಲ್ಲ ಅಂತ ಘೋಷಣೆ ಮಾಡಿದರು. ಯಾರಿಂದಲೂ ಬಾಡಿಗೆ ಸಂಗ್ರಹಿಸಬಾರದು ಎಂದು ಅವರು ವಿಜಯನಗರದ ಜಿಲ್ಲಾಧಿಕಾರಿಗಳಿಗೆ ಸೂಚನೆ ಸಹ ನೀಡಿದರು. ಕಳೆದ ಬಾರ ನಡೆದ ಹಂಪಿ ಉತ್ಸವ ಮಾಜಿ ಸಚಿವ ಆನಂದ್ ಸಿಂಗ್ ಅವರ ನೇತೃತ್ವದಲ್ಲಿ ನಡೆದಿತ್ತು ಮತ್ತು ಆಗ ತಲೆದೋರಿದ್ದ ಸಮಸ್ಯೆಗಳನ್ನು ಉಲ್ಲೇಖಿಸಿದ ಸಚಿವ ಜಮೀರ್ ನಯವಾಗಿ ಮಾಜಿ ಸಚಿವನ ಕಾಲೆಳೆದರು. ವಾಹನಗಳ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎದುರಾಗಿದ್ದ ಅಡಚಣೆಗಳ ಬಗ್ಗೆ ಸಚಿವ ಮಾತಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್