‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ?

Edited By:

Updated on: Aug 07, 2026 | 11:29 AM

ಸಚಿವ ಸ್ಥಾನ ಕೈತಪ್ಪಿದವರ ಅಸಮಾಧಾನ ಸಹಜ, ಸಿಎಂ ಡಿ.ಕೆ. ಶಿವಕುಮಾರ್ ಸಮಾಧಾನಪಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಯಾವುದೇ ಖಾತೆಯನ್ನು ನಿರ್ವಹಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಸಚಿವ ಬಿ. ನಾಗೇಂದ್ರ ಅವರಿಗೆ ಎಸ್​ಐಟಿ ಕ್ಲೀನ್ ಚಿಟ್ ನೀಡಿದ್ದು, ಅವರನ್ನು ಮುಳುಗಿಸಲು ಪಿತೂರಿ ನಡೆಯುತ್ತಿದೆ ಎಂದರು. ಹೈಕಮಾಂಡ್ ಸರ್ವೆ ಆಧಾರದ ಮೇಲೆ ಸಚಿವ ಸ್ಥಾನ ನೀಡುತ್ತದೆ, ಹಣದ ವದಂತಿ ಊಹಾಪೋಹ ಎಂದಿದ್ದಾರೆ.

ಚಿತ್ರದುರ್ಗ, ಆಗಸ್ಟ್​​ 07: ಯಾರಾದರೂ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಗೊತ್ತಾದರೆ ಅವರನ್ನು ಮುಗಿಸುವ ಯತ್ನಗಳು ನಡೆಯುತ್ತವೆ ಎಂದು ಸಚಿವ ಜಮೀರ್​​ ಅಹ್ಮದ್​​ ಖಾನ್​​ ಹೇಳಿದ್ದಾರೆ. ತಮ್ಮನ್ನು ಸೇರಿ ಬಿ. ನಾಗೇಂದ್ರ ವಿಚಾರದಲ್ಲಿಯೂ ಇದೇ ರೀತಿ ಆಗಿದೆ ಎಂದವರು ತಿಳಿಸಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅಸಮಾಧಾನಗಳು ಸಹಜ ಎಂದಿರುವ ಜಮೀರ್​​, ಹೈಕಮಾಂಡ್​​ಗೆ ಹಣ ಕೊಟ್ರೆ ಮಂತ್ರಿ ಆಗ್ತಾರೆ ಎಂಬ ಕೆಲ ಸ್ವಪಕ್ಷ ಶಾಸಕರ ಹೇಳಿಕೆಗಳನ್ನು ಅಲ್ಲಗಳೆದಿದ್ದಾರೆ. ಅವೆಲ್ಲವೂ ಊಹಾಪೋಹ ಎಂದವರು ತಿಳಿಸಿದ್ದಾರೆ. ತಮಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸೋದಾಗಿಯೂ ಅವರು ಇದೇ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us