CM was waiting: ಕ್ಯಾಬಿನೆಟ್ ಮೀಟಿಂಗ್ ಗೆ ಧಾವಂತದಲ್ಲಿ ಆಗಮಿಸಿದ ಸಚಿವರಿಗೆ ಮಾಧ್ಯಮದವರೊಂದಿಗೆ ಮಾತಾಡಲು ಪುರುಸೊತ್ತಿರಲಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Jun 28, 2023 | 2:00 PM

ಮುಖ್ಯಮಂತ್ರಿ ಕರೆದ ಸಂಪುಟ ಸಭೆಗೆ ಆಗಮಿಸಿದ ಸಚಿವರಿಗೆ ಮೀಟಿಂಗ್ ಶುರುವಾಯ್ತೇನೋ ಎಂಬ ಆತಂಕ ಕಾಡುತಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿಧಾನ ಸೌಧದಲ್ಲಿ ಕರೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಬೇರೆ ಬೇರೆ ಖಾತೆಗಳ ಸಚಿವರು ಒಳಗೆ ಹೋಗುವಾಗ ತೋರಿದ ಧಾವಂತ ನೋಡುವಂತಿತ್ತು! ಮೊದಲು ಆಗಮಿಸುವ ಸಚಿವ ಈಶ್ವರ್ ಖಂಡ್ರೆ (Eshwar Khandre), ಮಾಧ್ಯಮ ಪ್ರತಿನಿಧಿಗಳಿಗೆ ನಮಸ್ಕರಿಸಿ ಒಳಗೆ ಹೋಗುವಾಗ ಸರ್ ಸರ್ ಅಂತ ಸುದ್ದಿಗಾರರು ಕೂಗಿದಕ್ಕೆ ಅವರೆಡೆ ಬರೋದು ನಿಜವಾದರೂ ಮರುಕ್ಷಣವೇ ಓಡುತ್ತಾ ಮೆಟ್ಟಿಲು ಹತ್ತಿ ಒಳಗಡೆ ಹೋಗುತ್ತಾರೆ. ಆಮೇಲೆ ಬರುವ ಎಂಬಿ ಪಾಟೀಲ್ (MB Patil) ಸಹ ಕ್ಯಾಬಿನೆಟ್ ಮೀಟಿಂಗ್ ಕ್ಯಾಬಿನೆಟ್ ಮೀಟಿಂಗ್ ಅನ್ನುತ್ತಾ ಒಳಗೋಗುತ್ತಾರೆ. ನಂತರ ದಿನೇಶ್ ಗುಂಡೂರಾವ್ (Dinesh Gundu Rao) ರಾಜಗಾಂಭೀರ್ಯದೊಂದಿಗೆ ನಡೆದು ಬರತ್ತಾರಾದರೂ ಮಾಧ್ಯಮದವರನ್ನು ನೋಡಿ ಮುಗುಳ್ನಕ್ಕು ಕೈ ಜೋಡಿಸುತ್ತಾ ಒಳಗೆ ಹೋಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 28, 2023 02:00 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.