ಬೆಂಗಳೂರು: ಇಂದು ಕರ್ನಾಟಕ ವಿಧಾನ ಸಭೆಯ ವಿಶೇಷ ಅಧಿವೇಶನ ಕೊನೆಗೊಳ್ಳುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ಇತರ ಕೆಲ ಸಚಿವರು ದೆಹಲಿಗೆ ತೆರಳುತ್ತಿದ್ದಂತೆಯೇ ಇತ್ತ ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾದವು. ಮೊದಲಿಗೆ, ಡಿಕೆ ಸಹೋದರರ ಜೊತೆ ವೈರತ್ವ ಕಟ್ಟಿಕೊಂಡಿರುವ ಎಂಬಿ ಪಾಟೀಲ್ (MB Patil) ಸಿದ್ದರಾಮಯ್ಯನವರ ನಿವಾಸಕ್ಕೆ ದೌಡಾಯಿಸಿದರು. ಸ್ವಲ್ಪ ಹೊತ್ತಿನ ಬಳಿಕ ಡಿಕೆ ಶಿವಕುಮಾರ್ ಅವರಿಂದ ಮೊದಲಿಂದಲೂ ಅಂತರ ಕಾಯ್ದುಕೊಂಡಿರುವ ಸಚಿವ ಬಿಜೆಡ್ ಜಮೀರ್ ಅಹ್ಮದ್ (BZ Zameer Ahmed) ಕೂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು. ಈ ಗುಂಪುಗಾರಿಕೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದರೆ ಆಶ್ಚರ್ಯಪಡಬೇಕಿಲ್ಲ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:53 pm, Wed, 24 May 23