ಅಲ್ಪಸಂಖ್ಯಾತ ಸಮುದಾಯಗಳಿಗೆ ಕೆಎಂಡಿಸಿ ವತಿಯಿಂದ ಹಲವಾರು ಯೋಜನೆಗಳನ್ನು ಘೋಷಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಡ್ರೈವರ್ ನೇ ಮಾಲಿಕ ಸ್ಕೀಮ್ ಅಡಿಯಲ್ಲಿ ನಾಲ್ಕು ಚಕ್ರ ವಾಹನಗಳ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅರ್ಹ ವ್ಯಕ್ತಿಗೆ ತನ್ನದೇ ಆದ ವಾಹನ ಹೊಂದಲು ಕೆಎಮ್ ಡಿಸಿಯಿಂದ ರೂ. 8 ಲಕ್ಷ ನೀಡಲಾಗುವುದು, ಇದರಲ್ಲಿ 3 ಲಕ್ಷ ರೂ, ಸಬ್ಸಿಡಿ ಫಲಾನುಭವಿಗೆ ಸಿಗಲಿದೆ ಮತ್ತು ಉಳಿದ 5 ಲಕ್ಷ ರೂ. ಹಣವನ್ನು ಸರ್ಕಾರವೇ ಬ್ಯಾಂಕ್ ಗಳ ಮೂಲಕ ಲೋನ್ ಮಾಡಿಸಿಕೊಡುವುದು ಎಂದು ಜಮೀರ್ ಹೇಳಿದರು

ಅಲ್ಪಸಂಖ್ಯಾತ ಸಮುದಾಯಗಳಿಗೆ ಕೆಎಂಡಿಸಿ ವತಿಯಿಂದ ಹಲವಾರು ಯೋಜನೆಗಳನ್ನು ಘೋಷಿಸಿದ ಸಚಿವ ಜಮೀರ್ ಅಹ್ಮದ್ ಖಾನ್
|

Updated on: Aug 22, 2023 | 2:13 PM

ಬೆಂಗಳೂರು: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಇಂದು ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಅಲ್ಪಂಖ್ಯಾತರ ಕಲ್ಯಾಣ ಯೋಜನೆ (Minority Welfare Scheme) ಅಡಿ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಯೋಜನೆನಗಳ ಬಗ್ಗೆ ವಿವರಣೆ ನೀಡಿದರು. ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ 4 ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ಪುನರಾರಂಭಿಸಿದೆ ಮತ್ತು ನಾಲ್ಕು ಹೊಸ ಸ್ಕೀಮ್ ಗಳನ್ನು ಲಾಂಚ್ ಮಾಡಲಾಗಿದೆ ಎಂದು ಅವರು ಹೇಳಿದರು. ಡ್ರೈವರ್ ನೇ ಮಾಲಿಕ ಸ್ಕೀಮ್ ಅಡಿಯಲ್ಲಿ ನಾಲ್ಕು ಚಕ್ರ ವಾಹನಗಳ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅರ್ಹ ವ್ಯಕ್ತಿಗೆ ತನ್ನದೇ ಆದ ವಾಹನ ಹೊಂದಲು ಕೆಎಮ್ ಡಿಸಿಯಿಂದ (KMDC) ರೂ. 8 ಲಕ್ಷ ನೀಡಲಾಗುವುದು, ಇದರಲ್ಲಿ 3 ಲಕ್ಷ ರೂ, ಸಬ್ಸಿಡಿ ಫಲಾನುಭವಿಗೆ ಸಿಗಲಿದೆ ಮತ್ತು ಉಳಿದ 5 ಲಕ್ಷ ರೂ. ಹಣವನ್ನು ಸರ್ಕಾರವೇ ಬ್ಯಾಂಕ್ ಗಳ ಮೂಲಕ ಲೋನ್ ಮಾಡಿಸಿಕೊಡುವುದು ಎಂದು ಜಮೀರ್ ಹೇಳಿದರು. ಹಾಗೆಯೇ, ಉನ್ನತ ವ್ಯಾಸನಗಕ್ಕೆಂದು ವಿದೇಶಗಳಿಗೆ ಹೋಗಬಯಸುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ರೂ. 20 ಲಕ್ಷ ಸಾಲವನ್ನು ಕೆಎಂಡಿಸಿ ವತಿಯಿಂದ ನೀಡಲಾಗುವುದು ಎಂದು ಸಚಿವ ಹೇಳಿದರು. ಅದಲ್ಲದೆ, ವಿಚ್ಛೇದಿತ, ಅವಿವಾಹಿತ ಮತ್ತು ಒಂಟಿ ತಾಯಿ ಮಹಿಳೆಯರಿಗೆ ತಮ್ಮ ಸ್ವಂತ ಉದ್ಯೋಗ ಮಾಡಿಕೊಳ್ಳಲು ರೂ. 50,000 ಸಾಲ ನೀಡಲಾಗುವುದು ಮತ್ತು ಇದರಲ್ಲಿ 25,000 ರೂ. ಸಬ್ಸಿಡಿ ರೂಪದಲ್ಲಿ ಲಭ್ಯವಾಗುತ್ತದೆ ಎಂದು ಜಮೀರ್ ಅಹ್ಮದ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ