ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Aug 12, 2020 | 12:37 PM

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us