ತುಮಕೂರು: ತೋಟಕ್ಕೆ ನುಗ್ಗಿ ಹಲವಾರು ಅಡಿಕೆ ಸಸಿಗಳನ್ನು ಕಡಿದು ಹಾಕಿದ ದುಷ್ಟರು, ರೈತನ ಗೋಳಾಟ

ಅರುಣ್​ ಕುಮಾರ್​ ಬೆಳ್ಳಿ

Updated on: Apr 12, 2025 | 11:08 AM

ತಿರುಮಲ್ಲಯ್ಯನವರ ಗೋಳಾಟ ಕೇಳಲಾಗದು. ಸಾಲಸೋಲ ಮಾಡಿ ಅವರು ಅಡಿಕೆ ತೋಟ ಮಾಡುತ್ತ್ತಿದ್ದಾರೆ. ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ ತಮ್ಮ ನೆರವಿಗೆ ಬಂದಾರು ಎಂಬ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದಾರೆ. ಯಾಕೆಂದರೆ, ಚೇಳೂರು ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದರೂ ಪ್ರಯೋಜನವಾಗಿಲ್ಲವಂತೆ. ಶಾಸಕ ಸಹಾಯ ಮಾಡುತ್ತಾರೆಯೇ? ಕಾದು ನೋಡಬೇಕು.

ತುಮಕೂರು, ಏಪ್ರಿಲ್ 12: ಇದು ದುಷ್ಟತನದ ಪರಮಾವಧಿ ಅಂದರೆ ತಪ್ಪಾಗಲಾರದು. ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಶಿವರಾಂಪುರ ಗ್ರಾಮದಲ್ಲಿರುವ ತಿರುಮಲ್ಲಯ್ಯನವರ ಅಡಿಕೆ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು 80 ಅಡಿಕೆ ಗಿಡಗಳನ್ನು ನಿಷ್ಕರುಣೆಯಿಂದ ಕಡಿದುಹಾಕಿದ್ದಾರೆ. ಬೆಳೆದು ನಿಂತ ಸಸಿಗಳನ್ನು ಕಡಿದು ಹಾಕುವುದರಿಂದ ಯಾವ ಬಗೆಯ ವೈರತ್ವ ಸಾಧಿಸಿದಂತಾಗುತ್ತದೆ? ಅಡಿಕೆ ಗಿಡಗಳನ್ನು ಬೆಳೆಸಲು ರೈತ ಪಡುವ ಕಷ್ಟ ಅಷ್ಟಿಷ್ಟಲ್ಲ. ತಿರುಮಲ್ಲಯ್ಯನವರಿಗೆ ಆಗದವರು ಮಾಡಿರುವ ದುಷ್ಕೃತ್ಯವಿದು. ಹಿಂದೆಯೂ ಅವರು ಬೆಳೆದ ಮೆಡಿಸಿನಲ್ ಸೌತೆಕಾಯಿ ಬೆಳೆಯನ್ನು ದುಷ್ಟರು ನಾಶಮಾಡಿದ್ದರಂತೆ.

ಇದನ್ನೂ ಓದಿ:  ದಾವಣಗೆರೆ: ಕಿಡಿಗೇಡಿಗಳ‌ ಕಿತಾಪತಿ; ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಅಡಿಕೆ ಮರಗಳಿಗೆ ಬೆಂಕಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.