ಸಿಎಂ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿ ದುರುಪಯೋಗ; 15ರೂ.ಗೆ ಅಕ್ಕಿ ಖರೀದಿಸಿ 60 ರೂ.ಗೆ ಮಾರಾಟ

ಮೈಸೂರಿನ ಎನ್​​ಆರ್ ಮೊಹಲ್ಲಾ ಸೇರಿ ಹಲವು ಕಡೆ ಅನ್ನಭಾಗ್ಯ ಅಕ್ಕಿ ದಂಧೆ ನಡೆಯುತ್ತಿದೆ. ಅಪ್ರಾಪ್ತರ ಮೂಲಕ ದಂಧೆಕೋರರು ಅಕ್ಕಿ ಖರೀದಿ ಮಾಡಿಸ್ತಿದ್ದಾರೆ. ಹಾಡಹಗಲೇ ಅಪ್ರಾಪ್ತರು ರಾಜಾರೋಷವಾಗಿ ಅಕ್ಕಿ ಖರೀದಿ ಮಾಡ್ತಿದ್ದಾರೆ. ಕೇವಲ 15 ರಿಂದ 16 ರೂಪಾಯಿಗೆ ಅನ್ನಭಾಗ್ಯ ಅಕ್ಕಿ ಖರೀದಿಸಿ, ಮಾರುಕಟ್ಟೆಯಲ್ಲಿ 50 ರಿಂದ 60 ರೂಪಾಯಿಗೆ ಮಾರುತ್ತಿದ್ದಾರೆ.

ಸಿಎಂ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿ ದುರುಪಯೋಗ; 15ರೂ.ಗೆ ಅಕ್ಕಿ ಖರೀದಿಸಿ 60 ರೂ.ಗೆ ಮಾರಾಟ
| Edited By: Ayesha Banu

Updated on: Nov 14, 2023 | 2:34 PM

ಮೈಸೂರು, ನ.14: ಮೈಸೂರು ಸಿಎಂ ಸಿದ್ದರಾಮಯ್ಯ (Siddaramaiah) ತವರು ಜಿಲ್ಲೆ. ಆದರೆ ಇದೇ ಮೈಸೂರಿನಲ್ಲಿ ಅನ್ನಭಾಗ್ಯ (Anna Bhagya Scheme) ಅಕ್ಕಿ ದುರುಪಯೋಗ ಮಾಡಲಾಗಿದೆ. ಮನೆ ಮನೆಗೆ ತೆರಳಿ ಅನ್ನಭಾಗ್ಯ ಅಕ್ಕಿ ಖರೀದಿಸಿ ದಂಧೆಕೋರರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಮೈಸೂರಿನ ಎನ್​​ಆರ್ ಮೊಹಲ್ಲಾ ಸೇರಿ ಹಲವು ಕಡೆ ಅನ್ನಭಾಗ್ಯ ಅಕ್ಕಿ ದಂಧೆ ನಡೆಯುತ್ತಿದೆ. ಅಪ್ರಾಪ್ತರ ಮೂಲಕ ದಂಧೆಕೋರರು ಅಕ್ಕಿ ಖರೀದಿ ಮಾಡಿಸ್ತಿದ್ದಾರೆ. ಹಾಡಹಗಲೇ ಅಪ್ರಾಪ್ತರು ರಾಜಾರೋಷವಾಗಿ ಅಕ್ಕಿ ಖರೀದಿ ಮಾಡ್ತಿದ್ದಾರೆ. ಕೇವಲ 15 ರಿಂದ 16 ರೂಪಾಯಿಗೆ ಅನ್ನಭಾಗ್ಯ ಅಕ್ಕಿ ಖರೀದಿಸಿ, ಮಾರುಕಟ್ಟೆಯಲ್ಲಿ 50 ರಿಂದ 60 ರೂಪಾಯಿಗೆ ಮಾರುತ್ತಿದ್ದಾರೆ. ಅಕ್ಕಿ ಖರೀದಿಗೆ ಬಂದ ವಾಹನ ಜಪ್ತಿ ಮಾಡಿದ್ರೂ ದಂಧೆ ನಿಲ್ಲುತ್ತಿಲ್ಲ. ಆಟೋ & ದ್ವಿಚಕ್ರ ವಾಹನಗಳಲ್ಲಿ ಮನೆ ಮನೆಗೆ ತೆರಳಿ ಮಕ್ಕಳು ಅಕ್ಕಿ ಖರೀದಿ ಮಾಡ್ತಿದ್ದಾರೆ. 2 ತಿಂಗಳ ಹಿಂದೆ ಆಟೋದಲ್ಲಿ ಅನ್ನಭಾಗ್ಯ ಅಕ್ಕಿ ಸಾಗಾಣೆ ಮಾಡ್ತಿರುವ ವಿಡಿಯೋ ವೈರಲ್ ಆಗಿತ್ತು. ಮಕ್ಕಳು ಅನ್ನೋ ಕಾರಣಕ್ಕೆ ಅವರ ವಿರುದ್ಧ ಕೇಸ್ ದಾಖಲಾಗಿರಲಿಲ್ಲ. ಅಪ್ರಾಪ್ತರಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ರೂ ಅನ್ನಭಾಗ್ಯ ದಂಧೆ ನಿಲ್ಲುತ್ತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ