ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಮದುವೆಗೆಂದು ಇಟ್ಟಿದ್ದ ಚಿನ್ನ, ಹಣ ದೋಚಿದ ಖದೀಮರು

Edited By:

Updated on: Nov 17, 2024 | 5:10 PM

ಮದುವೆ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಮದುವೆಗೆಂದು ಇಟ್ಟಿದ್ದ ಚಿನ್ನ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಇದರಿಂದ ಮನೆಮಂದಿ ಕಂಗಾಲಾಗಿದ್ದಾರೆ.

ಬೆಂಗಳೂರು, (ನವೆಂಬರ್ 17): ಖದೀಮರು ಮದುವೆ ಮನೆಯಲ್ಲಿ ತಮ್ಮ ಕೈಚಳ ತೋರಿಸಿದ್ದಾರೆ. ಹೌದಯ..ಮದುವೆಗೆಂದು ಇಟ್ಟಿದ್ದ ನಗದು ಹಣ ಹಾಗೂ ಚಿನ್ನವನ್ನು ಕದ್ದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಟೀಚರ್ಸ್ ಲೇಔಟ್​ನಲ್ಲಿರುವ ಶಿವಣ್ಣ ಎಂಬುವವರ ಮನೆಯಲ್ಲಿ ನಡೆದಿದೆ. ನಿಶ್ಚಿತಾರ್ಥಕ್ಕೆಂದು ಎಲ್ಲರೂ ಮನೆಯಿಂದ ಕಲ್ಯಾಣ ಮಂಟಪಕ್ಕೆ ತೆರಳಿದ್ದರು. ಅದೇ ಸಮಯದಲ್ಲಿ ಇತ್ತ ಕಳ್ಳರು, ಮನೆಗೆ ನುಗ್ಗಿ ಮದುವೆಗೆಂದು ಇಟ್ಟಿದ್ದ 5 ಲಕ್ಷ ರೂಪಾಯಿ ನಗದು, 6 ಲಕ್ಷ ಮೌಲ್ಯದ 85 ಗ್ರಾಂ ಚಿನ್ನವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ನಿಶ್ಚಿತಾರ್ಥ ಮುಗಿಸಿಕೊಂಡು ಕುಟುಂಬಸ್ಥರು ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆ ಬಾಗಿಲು ಮುರಿದು ಎಲ್ಲಾವನ್ನೂ ದೋಚಿಕೊಂಡು ಹೋಗಿದ್ದಾರೆ. ಮದ್ವೆಗೆಂದು ಇಟ್ಟಿದ್ದ ಹಣ, ಚಿನ್ನ ಕಳೆದುಕೊಂಡು ಮನೆಮಂದಿ ಕಂಗಾಲಾಗಿದ್ದಾರೆ.

Published on: Nov 17, 2024 05:07 PM
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More