AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಝಾಹಿರ್ ಯೂಸುಫ್
|

Updated on: Jan 10, 2026 | 8:29 AM

Share

MI vs RCB: 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು 67 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ಹಂತದಲ್ಲಿ ಕಣಕ್ಕಿಳಿದ ನಡಿನ್ ಡಿ ಕ್ಲರ್ಕ್​ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಮಾಡಿದ 3 ತಪ್ಪುಗಳು ಆರ್​ಸಿಬಿ ಪಾಲಿಗೆ ವರವಾಯಿತು ಎಂದರೆ ತಪ್ಪಾಗಲಾರದು.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು.

155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು 67 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ಹಂತದಲ್ಲಿ ಕಣಕ್ಕಿಳಿದ ನಡಿನ್ ಡಿ ಕ್ಲರ್ಕ್​ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಮಾಡಿದ 3 ತಪ್ಪುಗಳು ಆರ್​ಸಿಬಿ ಪಾಲಿಗೆ ವರವಾಯಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ಏಕಾಂಗಿ ಹೋರಾಟ ಮುಂದುವರೆಸಿದ್ದ ನಡಿನ್ ಡಿ ಕ್ಲರ್ಕ್ 19ನೇ ಓವರ್​ನ ಮೊದಲ ಎಸೆತದಲ್ಲೇ ಸುಲಭ ಕ್ಯಾಚ್ ನೀಡಿದ್ದರು. ಆದರೆ ಈ ಸುಲಭ ಕ್ಯಾಚ್ ಹಿಡಿಯುವಲ್ಲಿ ನಾಟ್ ಸ್ಕೀವರ್ ಬ್ರಂಟ್ ವಿಫಲರಾಗಿದ್ದರು.

ಇದಾದ ಬಳಿಕ 19ನೇ ಓವರ್​ನ 4ನೇ ಎಸೆತದಲ್ಲಿ ನಡಿನ್ ಡಿ ಕ್ಲರ್ಕ್ ಲೆಗ್ ಸೈಡ್​ನತ್ತ ಕ್ಯಾಚ್ ನೀಡಿದ್ದರು. ಈ ವೇಳೆ ಬೌಂಡರಿ ಲೈನ್​ನಲ್ಲಿದ್ದ ಅಮೆಲಿಯಾ ಕೆರ್ ಕ್ಯಾಚ್ ಕೈ ಚೆಲ್ಲಿದ್ದರು.

ಅತ್ತ ಕ್ಯಾಚ್ ಡ್ರಾಪ್ ಆದ ಬೆನ್ನಲ್ಲೇ ಅಮನ್​​ಜೋತ್ ಕೌರ್ ಚೆಂಡನ್ನು ವಿಕೆಟ್ ಕೀಪರ್ ಕಮಲಿನಿಯತ್ತ ಎಸೆದರು. ಆದರೆ ಚೆಂಡು ಸರಿಯಾಗಿ ಹಿಡಿಯುವಲ್ಲಿ ವಿಫಲರಾದ ಕಮಲಿನಿ ಸುಲಭ ರನೌಟ್ ಅವಕಾಶವನ್ನು ಕೈ ತಪ್ಪಿಸಿಕೊಂಡರು.

ಹೀಗೆ ಒಂದೇ ಓವರ್​ನಲ್ಲಿ ಮೂರು ಜೀವದಾನ ಪಡೆದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 6,4,6,4 ಬಾರಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಇತ್ತ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸತತ ಮೂರು ತಪ್ಪುಗಳನ್ನು ಮಾಡುತ್ತಾ ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡಿತು.

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More