AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು

ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು

ಪ್ರಸನ್ನ ಹೆಗಡೆ
|

Updated on:Aug 03, 2026 | 6:29 PM

Share

Karnataka Cabinet Expansion: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ ತಾರಕಕ್ಕೇರಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡರು ಕಣ್ಣೀರಿಟ್ಟಿದ್ದಾರೆ. ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆಗೂ ಜಗ್ಗುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.

ಬೆಂಗಳೂರು, ಆಗಸ್ಟ್​​ 03: ಸಚಿವ ಸಂಪುಟ ವಿಸ್ತರಣೆ ಬೆನ್ನಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವಸ್ಥಾನ ಸಿಗದಿದ್ದಕ್ಕೆ ಅಸಮಾಧಾನಿತ ಶಾಸಕರು ಟಿ.ಬಿ.ಜಯಚಂದ್ರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಅಪ್ಪಾಜಿ ನಾಡಗೌಡ ಮತ್ತು ಎಂ.ವೈ.ಗೋಪಾಲಕೃಷ್ಣ ಮೀಟಿಂಗ್​​ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ನಾಡಗೌಡರು ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ತಾನು ಸಚಿವನಾಗಬೇಕೆಂದು ಬಹಳಷ್ಟು ಜನ ಬಯಸಿದ್ದರು. ಆದರೆ ಇವತ್ತು ಹೀಗಾಗಿದೆ ಎಂದವರು ಭಾವುಕರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 03, 2026 06:29 PM

Follow Us