AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ಉತ್ತರಿಸಿದ ಎಪಿ ಅರ್ಜುನ್

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ಉತ್ತರಿಸಿದ ಎಪಿ ಅರ್ಜುನ್

ರಾಜೇಶ್ ದುಗ್ಗುಮನೆ
|

Updated on: Jul 27, 2024 | 8:17 AM

Share

ನಿರ್ದೇಶಕ ಎಪಿ ಅರ್ಜುನ್ ಅವರು ಬೇರೆಯವರ ಜೊತೆ ಡೀಲ್ ಮಾಡಿಕೊಂಡು ನಿರ್ಮಾಪಕರು ನೀಡಿದ ಹಣದಲ್ಲೇ 50 ಲಕ್ಷ ರೂಪಾಯಿ ಕಮಿಷನ್ ಪಡೆದಿದ್ದಾರೆ ಎನ್ನುವ ಆರೋಪ ಬಂದಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ನಿರ್ಮಾಪಕರ ಜೊತೆ ಮನಸ್ತಾಪ ಆಗಿರೋದು ಏಕೆ ಎಂಬುದನ್ನು ವಿವರಿಸಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಉದಯ್ ಕೆ. ಮೆಹ್ತಾ ಬಂಡವಾಳ ಹಾಕಿದ್ದಾರೆ. ಈ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ಅವರು ಬೇರೆಯವರ ಜೊತೆ ಡೀಲ್ ಮಾಡಿಕೊಂಡು ನಿರ್ಮಾಪಕರು ನೀಡಿದ ಹಣದಲ್ಲೇ 50 ಲಕ್ಷ ರೂಪಾಯಿ ಕಮಿಷನ್ ಪಡೆದಿದ್ದಾರೆ ಎನ್ನುವ ಆರೋಪ ಬಂದಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ನಿರ್ಮಾಪಕರ ಜೊತೆ ಮನಸ್ತಾಪ ಆಗಿರೋದು ಏಕೆ ಎಂಬುದನ್ನು ವಿವರಿಸಿದ್ದಾರೆ. ‘ನಮ್ಮ ಸಿನಿಮಾ ಎಂದಲ್ಲ, ದೊಡ್ಡ ಬಜೆಟ್​ ಹಾಕಿ ಮಾಡುವ ಎಲ್ಲಾ ಸಿನಿಮಾಗಳಲ್ಲೂ ಸಾಮಾನ್ಯವಾಗಿ ನಿರ್ದೇಶಕರು-ನಿರ್ಮಾಪಕರು, ನಿರ್ದೇಶಕರು-ಛಾಯಾಗ್ರಾಹಕರ ಮಧ್ಯೆ ಕೆಲವು ವಿಚಾರಗಳಲ್ಲಿ ಮನಸ್ತಾಪ ಇದ್ದೇ ಇರುತ್ತದೆ. ಅದನ್ನು ಮೆಟ್ಟಿನಿಂತು ಮುಂದೆ ಸಾಗಿದಾಗ ಮಾತ್ರ ಸಿನಿಮಾ ಆಗುತ್ತದೆ’ ಎಂದಿದ್ದಾರೆ ಎಪಿ ಅರ್ಜುನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More