ಶಿವಾಜಿ ಮಹಾರಾಜ್ ಪ್ರತಿಮೆ ತೆರವು ವಿವಾದ: ಬಿಜೆಪಿ ಮತ್ತು ಹಿಂದೂ ಜಾಗರಣ ವೇದಿಕೆ ನೀಡಿರುವ ಬಾಗಲಕೋಟೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 19, 2023 | 10:17 AM

ಜನ ಒಂದು ಸಾಮಾನ್ಯ ಶನಿವಾರದಂತೆ ರಸ್ತೆಗಲ್ಲಿ ಓಡಾಡುತ್ತಿರುವುದನ್ನು ನೋಡಬಹುದು. ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳು ಸಹ ಬಾಗಲಕೋಟೆ ಬಸ್ ನಿಲ್ದಾಣದಿಂದ ಎಂದಿನಂತೆ ಓಡಾಡುತ್ತಿವೆ.

ಬಾಗಲಕೋಟೆ: ನಗರದ ಟ್ರಾಫಿಕ್ ಸರ್ಕಲ್​ ನಿಂದ (traffic circle) ಛತ್ರಪತಿ ಶಿವಾಜಿ ಮಹಾರಾಜ್ (Chhatrapati Shivaji Maharaj) ಪ್ರತಿಮೆ ತೆರವಿಗೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಬಂದ್ ಗೆ (Bagalkot Bandh) ಕರೆ ನೀಡಲಾಗಿದ್ದು ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟಿವಿ9 ಕನ್ನಡ ವಾಹಿನಿಯ ಬಾಗಲಕೋಟೆ ವರದಿಗಾರ ಕಳಿಸಿರುವ ವಿಡಿಯೋದಲ್ಲಿ ಕಾಣುತ್ತಿರುವ ಹಾಗೆ, ಕೆಲ ಅಂಗಡಿ ಮುಂಗಟ್ಟು, ಹೋಟೆಲ್ ಮತ್ತು ಬೇಕರಿಗಳು ಎಂದಿನಂತೆ ತೆರೆದುಕೊಂಡಿದ್ದು ತಮ್ಮ ವ್ಯಾಪಾರ ವಹಿವಾಟು ನಡೆಸಿವೆ. ಜನ ಒಂದು ಸಾಮಾನ್ಯ ಶನಿವಾರದಂತೆ ರಸ್ತೆಗಲ್ಲಿ ಓಡಾಡುತ್ತಿರುವುದನ್ನು ನೋಡಬಹುದು. ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳು ಸಹ ಬಾಗಲಕೋಟೆ ಬಸ್ ನಿಲ್ದಾಣದಿಂದ ಎಂದಿನಂತೆ ಓಡಾಡುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆ ಬಾಗಲಕೋಟೆ ಬಂದ್​ ಆಚರಣೆಗೆ ಕರೆ ನೀಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.