ಬೆಂಗಳೂರು, ಆ.24: ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸುರುವಾಗಿದೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್(Byrathi Basavaraj) ಅವರು ಕಾಂಗ್ರೆಸ್ಗೆ ಸೇರ್ಪಡೇ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ‘ಯಾವುದೇ ಕಾರಣಕ್ಕೂ ನಾನು ಭಾರತೀಯ ಜನತಾ ಪಕ್ಷ ತೊರೆಯಲ್ಲ. ನಾನು ಬಿಜೆಪಿ ಬಿಡುತ್ತಿದ್ದೇನೆಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಾನು ಬಿಜೆಪಿ ಬಿಡುವ ಸಂದರ್ಭ ಬಂದರೆ ನಿವೃತ್ತಿಯಾಗಿ ಮನೆಯಲ್ಲಿರುವೆ ಎಂದರು.
ಕಾಂಗ್ರೆಸ್ನಿಂದ ನನಗೆ ಆಹ್ವಾನ ಬಂದಿಲ್ಲ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಇನ್ನು ಎಸ್.ಟಿ. ಸೋಮಶೇಖರ್ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ