ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ನಡೆದಿವೆ ಎನ್ನುತ್ತಾ ಕೆಡಿಪಿ ಮೀಟಿಂಗ್ ನಲ್ಲಿ ತಮ್ಮ ಫೋನ್ ಬಿಸಾಡಿದ ಶಾಸಕ ಚನ್ನಬಸ್ಸಪ್ಪ

ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ನಡೆದಿವೆ ಎನ್ನುತ್ತಾ ಕೆಡಿಪಿ ಮೀಟಿಂಗ್ ನಲ್ಲಿ ತಮ್ಮ ಫೋನ್ ಬಿಸಾಡಿದ ಶಾಸಕ ಚನ್ನಬಸ್ಸಪ್ಪ
|

Updated on: Jun 29, 2024 | 5:56 PM

ಚನ್ನಬಸಪ್ಪರನ್ನು ಸಮಾಧಾನಪಡಿಸಿ ಮಾತಾಡುವ ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಮತ್ತು ತೀರ್ಥಹಳ್ಳಿಯಲ್ಲಿ ಗೋ ತ್ಯಾಜ್ಯ ಪತ್ತೆಯಾಗಿದೆ, ತಾವು ಗೃಹ ಸಚಿವರಾಗಿದ್ದಾಗಲೂ ಗೋಹತ್ಯೆ ಅಕ್ರಮವಾಗಿ ನಡೆಯುತ್ತಿತ್ತು, ಪೊಲೀಸರು ಹೆಚ್ಚಿನ ಎಚ್ಚರವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಇವರೆಲ್ಲ ಮಾತಾಡುವಾಗ ಒಮ್ಮೆಯೂ ಸಚಿವ ಮಧು ಬಂಗಾರಪ್ಪ ಮುಖ ಕಾಣಿಸುವುದಿಲ್ಲ.

ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಡೆಸಿದ ಕೆಡಿಪಿ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಅಕ್ರಮ ಗೋ ಹತ್ಯೆ ವಿಷಯದ ಮೇಲೆ ಜೋರು ಚರ್ಚೆ ನಡೆಯಿತು. ಗೋ ಹತ್ಯೆ ನಿಷೇಧ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದ್ದರೂ ಶಿವಮೊಗ್ಗ ಪೊಲೀಸ್ ವ್ವವಸ್ಥೆ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ, ಗೋಹತ್ಯೆ ನಡೆಸಿದವರ ವಿರುದ್ಧ ದೂರು ದಾಖಲಿಸಿದರೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅವರ ಕೆಳಹಂತದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳುವುದಿಲ್ಲ ಎಂದು ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ಕೋಪದಲ್ಲಿ ಹೇಳಿದರು. ಗೋಹತ್ಯೆಯ ನಡೆದ ವಿಡಿಯೋಗಳು ಅವರ ಮೊಬೈಲ್ ನಲ್ಲಿದ್ದವು. ಈ ಹಂತದಲ್ಲಿ ಎದ್ದು ನಿಂತು ಮಾತಾಡಿದ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು ಜಿಲ್ಲೆಯಲ್ಲಿ ಗೋಹತ್ಯೆ ಎಲ್ಲೂ ನಡೆದಿಲ್ಲ ಬಕ್ರೀದ್ ಸಂದರ್ಭದಲ್ಲಿ ಕೇವಲ ಕುರಿಗಳನ್ನು ಬಲಿ ನೀಡಲಾಗಿದೆ ಎಂದು ಹೇಳುತ್ತಾರೆ. ಆಗ ಮತ್ತಷ್ಟು ರೊಚ್ಚಿಗೇಳುವ ಚನ್ನಬಸಪ್ಪ ವಿಡಿಯೋಗಳನ್ನು ತೋರಿಸುತ್ತಾ ಗೋವುಗಳು ಬಿಲ್ಕಿಸ್ ಬಾನು ಅವರಿಗೆ ಕುರಿಗಳ ಹಾಗೆ ಕಾಣುತ್ತವೆಯೇ ಅಂತ ಕೋಪದಲ್ಲಿ ಹೇಳುತ್ತಾ ತಮ್ಮ ಮೊಬೈಲನ್ನು ನೆಲಕ್ಕೆ ಬಿಸಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಹೆಚ್ಚುತ್ತಿಲ್ಲ ಜಾನುವಾರು ‌ಸಂಖ್ಯೆ; ಕಳೆದ 10 ವರ್ಷದಿಂದ ಇಳಿಕೆಯತ್ತ ಸಾಗಿದ ಗೋ ಸಂತತಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ