ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ನಡೆದಿವೆ ಎನ್ನುತ್ತಾ ಕೆಡಿಪಿ ಮೀಟಿಂಗ್ ನಲ್ಲಿ ತಮ್ಮ ಫೋನ್ ಬಿಸಾಡಿದ ಶಾಸಕ ಚನ್ನಬಸ್ಸಪ್ಪ

ಚನ್ನಬಸಪ್ಪರನ್ನು ಸಮಾಧಾನಪಡಿಸಿ ಮಾತಾಡುವ ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಮತ್ತು ತೀರ್ಥಹಳ್ಳಿಯಲ್ಲಿ ಗೋ ತ್ಯಾಜ್ಯ ಪತ್ತೆಯಾಗಿದೆ, ತಾವು ಗೃಹ ಸಚಿವರಾಗಿದ್ದಾಗಲೂ ಗೋಹತ್ಯೆ ಅಕ್ರಮವಾಗಿ ನಡೆಯುತ್ತಿತ್ತು, ಪೊಲೀಸರು ಹೆಚ್ಚಿನ ಎಚ್ಚರವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಇವರೆಲ್ಲ ಮಾತಾಡುವಾಗ ಒಮ್ಮೆಯೂ ಸಚಿವ ಮಧು ಬಂಗಾರಪ್ಪ ಮುಖ ಕಾಣಿಸುವುದಿಲ್ಲ.

ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ನಡೆದಿವೆ ಎನ್ನುತ್ತಾ ಕೆಡಿಪಿ ಮೀಟಿಂಗ್ ನಲ್ಲಿ ತಮ್ಮ ಫೋನ್ ಬಿಸಾಡಿದ ಶಾಸಕ ಚನ್ನಬಸ್ಸಪ್ಪ
|

Updated on: Jun 29, 2024 | 5:56 PM

ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಡೆಸಿದ ಕೆಡಿಪಿ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಅಕ್ರಮ ಗೋ ಹತ್ಯೆ ವಿಷಯದ ಮೇಲೆ ಜೋರು ಚರ್ಚೆ ನಡೆಯಿತು. ಗೋ ಹತ್ಯೆ ನಿಷೇಧ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದ್ದರೂ ಶಿವಮೊಗ್ಗ ಪೊಲೀಸ್ ವ್ವವಸ್ಥೆ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ, ಗೋಹತ್ಯೆ ನಡೆಸಿದವರ ವಿರುದ್ಧ ದೂರು ದಾಖಲಿಸಿದರೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅವರ ಕೆಳಹಂತದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳುವುದಿಲ್ಲ ಎಂದು ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ಕೋಪದಲ್ಲಿ ಹೇಳಿದರು. ಗೋಹತ್ಯೆಯ ನಡೆದ ವಿಡಿಯೋಗಳು ಅವರ ಮೊಬೈಲ್ ನಲ್ಲಿದ್ದವು. ಈ ಹಂತದಲ್ಲಿ ಎದ್ದು ನಿಂತು ಮಾತಾಡಿದ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು ಜಿಲ್ಲೆಯಲ್ಲಿ ಗೋಹತ್ಯೆ ಎಲ್ಲೂ ನಡೆದಿಲ್ಲ ಬಕ್ರೀದ್ ಸಂದರ್ಭದಲ್ಲಿ ಕೇವಲ ಕುರಿಗಳನ್ನು ಬಲಿ ನೀಡಲಾಗಿದೆ ಎಂದು ಹೇಳುತ್ತಾರೆ. ಆಗ ಮತ್ತಷ್ಟು ರೊಚ್ಚಿಗೇಳುವ ಚನ್ನಬಸಪ್ಪ ವಿಡಿಯೋಗಳನ್ನು ತೋರಿಸುತ್ತಾ ಗೋವುಗಳು ಬಿಲ್ಕಿಸ್ ಬಾನು ಅವರಿಗೆ ಕುರಿಗಳ ಹಾಗೆ ಕಾಣುತ್ತವೆಯೇ ಅಂತ ಕೋಪದಲ್ಲಿ ಹೇಳುತ್ತಾ ತಮ್ಮ ಮೊಬೈಲನ್ನು ನೆಲಕ್ಕೆ ಬಿಸಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಹೆಚ್ಚುತ್ತಿಲ್ಲ ಜಾನುವಾರು ‌ಸಂಖ್ಯೆ; ಕಳೆದ 10 ವರ್ಷದಿಂದ ಇಳಿಕೆಯತ್ತ ಸಾಗಿದ ಗೋ ಸಂತತಿ

Follow us
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ