AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಸಿಂಗಲ್-ಪೇರೆಂಟ್ ಮಹಿಳೆಯ ಮಗಳಿಗೆ ಸ್ಕಾಲರ್ ಶಿಪ್, ಶಿಕ್ಷಣ ಮತ್ತು ನೌಕರಿ ಕೊಡಿಸುವ ಆಶ್ವಾಸನೆ ನೀಡಿದ ಪ್ರದೀಪ್ ಈಶ್ವರ್

Chikkaballapur: ಸಿಂಗಲ್-ಪೇರೆಂಟ್ ಮಹಿಳೆಯ ಮಗಳಿಗೆ ಸ್ಕಾಲರ್ ಶಿಪ್, ಶಿಕ್ಷಣ ಮತ್ತು ನೌಕರಿ ಕೊಡಿಸುವ ಆಶ್ವಾಸನೆ ನೀಡಿದ ಪ್ರದೀಪ್ ಈಶ್ವರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:May 22, 2023 | 11:42 AM

Share

ಅಲ್ಲಿಂದ ಹೊರಡುವ ಮೊದಲು ಬಾಲಕಿಗೆ ಚೆನ್ನಾಗಿ ಓದಿ ಅಮ್ಮನಿಗೆ ಹೆಸರು ತರಬೇಕು ಅಂತಲೂ ಪ್ರದೀಪ್ ಈಶ್ವರ್ ಹೇಳುತ್ತಾರೆ.

ಚಿಕ್ಕಬಳ್ಳಾಪುರ: ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ (Pradeep Eshwar) ಕ್ಷೇತ್ರದಲ್ಲಿ ಸುತ್ತುತ್ತಾ ಜನರ ಕಷ್ಟ ಸುಖ ವಿಚಾರಿಸುವುದನ್ನು ಮುಂದುವರಿಸಿದ್ದಾರೆ. ಇಲ್ಲೊಬ್ಬ ಸಿಂಗಲ್ ಪೇರೆಂಟ್ (single-parent) ಮಹಿಳೆಯನ್ನು ಅವರು ಮಾತಾಡಿಸುವ ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಾರೆ. ಹಾಗೆ ಮಾಡುವಾಗ ವೋಟು ಕೇಳಲು ಬಂದಿಲ್ಲ, ಆಶೀರ್ವಾದ ಪಡೆಯಲು ಬಂದಿದ್ದೇನೆ ಅಂತ ತೆಲುಗು ಭಾಷೆಯಲ್ಲಿ ಹೇಳುತ್ತಾರೆ. ಶಾಲೆಯೊಂದರಲ್ಲಿ ಓದುತ್ತಿರುವ ಮಹಿಳೆಯ ಮಗಳಿಗೆ ಸ್ಕಾಲರ್ ಶಿಪ್ (scholarship) ಕೊಡಿಸುವ ಭರವಸೆ ನೀಡುತ್ತಾರಲ್ಲದೆ ಆಕೆಯ ಶಿಕ್ಷಣದ (education) ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಾಗಿ ಹೇಳುತ್ತಾರೆ. ಬಳಿಕ ಮಹಿಳೆಯ ಕಡೆ ತಿರುಗಿ ಮಗಳಿಗೆ ನೌಕರಿ (job) ಕೊಡಿಸುವ ಜವಾಬ್ದಾರಿ ತನ್ನದು ಎನ್ನುತ್ತಾರೆ. ಅಲ್ಲಿಂದ ಹೊರಡುವ ಮೊದಲು ಬಾಲಕಿಗೆ ಚೆನ್ನಾಗಿ ಓದಿ ಅಮ್ಮನಿಗೆ ಹೆಸರು ತರಬೇಕು ಅಂತಲೂ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: May 22, 2023 11:42 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.