ಪತ್ನಿ ಭವಾನಿಯಿಂದ ಅವಾಚ್ಯ ಪದ ಬಳಸಿ ನಿಂದನೆ, ಆದರೆ ಕ್ಷಮೆಯಾಚಿಸಿದ್ದು ಪತಿ ಹೆಚ್ ಡಿ ರೇವಣ್ಣ

ಭವಾನಿ ರೇವಣ್ಣ ಅವರು ತಮ್ಮ ಕಾರಿಗೆ ಗುದ್ದಿದ ದ್ವಿಚಕ್ರ ಸವಾರನನ್ನು ಬಯ್ಯುವಾಗ ಬಳಸಿರುವ ಭಾಷೆ ಒಬ್ಬ ಜನ ಪ್ರತಿನಿಧಿ, ಶಾಸಕನ ಪತ್ನಿ, ಸಂಸದ ಮತ್ತು ವಿಧಾನ ಪರಿಷತ್ ಸದಸ್ಯನ ತಾಯಿಗೆ ತಕ್ಕುದಲ್ಲ. ಹಾಸನ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಭವಾನಿ ಜಿಲ್ಲೆಯಾದ್ಯಂತ ಒಳ್ಳೆ ಹೆಸರಿಟ್ಟುಕೊಂಡಿದ್ದಾರೆ, ಹಾಗಾಗಿ, ಅವರು ಸಾರ್ವಜನಿಕವಾಗಿ ಸಂಯಮ ಕಳೆದುಕೊಳ್ಳಬಾರದಿತ್ತು.

ಪತ್ನಿ ಭವಾನಿಯಿಂದ ಅವಾಚ್ಯ ಪದ ಬಳಸಿ ನಿಂದನೆ, ಆದರೆ ಕ್ಷಮೆಯಾಚಿಸಿದ್ದು ಪತಿ ಹೆಚ್ ಡಿ ರೇವಣ್ಣ
|

Updated on: Dec 04, 2023 | 4:55 PM

ಬೆಳಗಾವಿ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ (Bhavani Revanna) ಅವರ ಕಾರು ಮತ್ತು ಬೈಕ್ ಒಂದರ ನಡುವೆ ಮೈಸೂರಿನ ಸಾಲಿಗ್ರಾಮ ಜಂಕ್ಷನ್ ಬಳಿ ಮೂರು ದಿನಗಳ ಹಿಂದೆ ನಡೆದ ಒಂದು ಅಪಘಾತದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಅವರ ಕುಟುಂಬದವರು ರಕ್ಷಣೆಗೆ ಧಾವಿಸಿದ್ದಾರೆ. ಬೈಕ್ ಸವಾರನಿಗೆ (biker) ಭವಾನಿ ಅವರು ಅವಾಚ್ಯ ಪದಗಳಲ್ಲಿ ನಿಂದಿಸಿರೋದು ವಿಡಿಯೋದಲ್ಲಿ ದಾಖಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದಿರುವ ಭವಾನಿಯವರ ಪತಿ ಮತ್ತು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರನ್ನು ಸುವರ್ಣ ಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳು ವಿಡಿಯೋ ಬಗ್ಗೆ ಕೇಳಿದಾಗ ಅವರು ತಪ್ಪೆಲ್ಲ ಬೈಕ್ ಸವಾರನ ಮೇಲೆ ಹೊರೆಸಿದರು. ಅವನು ಕುಡಿದು ಬೈಕ್ ಓಡಿಸುತ್ತಿದ್ದ ಅಂತಲೂ ಹೇಳಿದರು. ಅಲ್ಲಾ ಸಾರ್, ಮೇಡಂ ಮನಸ್ಸಿಗೆ ಬಂದಂತೆ ಬೈದಾಡಿದರಲ್ಲ ಅಂತ ಪತ್ರಕರ್ತರು ಹೇಳಿದಾಗ ತಮ್ಮ ವರಸೆ ಬದಲಾಯಿಸಿದ ರೇವಣ್ಣ ತನ್ನ ಪತ್ನಿಯ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು