ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್
ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ ಭವಿಷ್ಯ ನಿಜವಾಗದಿದ್ದರೆ ತಮ್ಮ ರಾಜಕೀಯ ವೃತ್ತಿ ಬೇಡ ಎಂದು ಇಕ್ಬಾಲ್ ಸವಾಲು ಹಾಕಿದ್ದಾರೆ.
ರಾಮನಗರ, ಫೆಬ್ರವರಿ 28: ಗುರುಗಳು ಧ್ಯಾನದಿಂದ ಎದ್ದಿಲ್ಲ, ಎದ್ದ ತಕ್ಷಣ ಡೇಟ್ ಹೇಳುತ್ತಾರೆ. ಅವರು ಕೊಟ್ಟ ದಿನಾಂಕದೊಳಗೆ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೆಜ್ಜರಹಳ್ಳಿಕಟ್ಟೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ನಾನು ನಿಜವಾಗಿಯೂ ಹೇಳುತ್ತಿದ್ದೇನೆ, ನಾನು ಸುಳ್ಳು ಹೇಳುತ್ತಿಲ್ಲ. ಗುರುಗಳು ಧ್ಯಾನದಿಂದ ಎದ್ದ ತಕ್ಷಣ ಒಂದು ಡೇಟ್ ಕೊಡುತ್ತಾರೆ. ಆ ದಿನಾಂಕವೇ ಅಂತಿಮವಾಗಿರುತ್ತದೆ. ಗುರುಗಳು ಹೇಳಿದಂತೆ ಆಗಿಲ್ಲ ಅಂದರೆ ನನಗೆ ರಾಜಕಾರಣ ಬೇಡ ಎಂದಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

