Kannada Rajyotsava: ಅಣ್ಣವ್ರ ಹಾಡಿಕೆ ಭರ್ಜರಿ ಸ್ಟೆಪ್ಸ್ ಹಾಕಿದ ಶಾಸಕ ಎನ್​ಹೆಚ್ ಕೋನರೆಡ್ಡಿ

Edited By:

Updated on: Nov 01, 2023 | 3:38 PM

ಇಂದು ರಾಜ್ಯಾದ್ಯಂತ 68ನೇ ಅದ್ದೂರಿ ಕನ್ನಡರಾಜೋತ್ಸವ ಆಚರಿಸಲಾಗಿದೆ. ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಡಾ. ರಾಜ್​ಕುಮಾರ್​ ಚಿತ್ರದಲ್ಲಿ ಹಾಡಿಗೆ ನವಲಗುಂದ ಶಾಸಕ ಎನ್​ಹೆಚ್ ಕೋನರೆಡ್ಡಿ ಬಾವುಟ ಹಿಡಿದು ಸಖತ್​ ಡ್ಯಾನ್ಸ್ ಮಾಡಿದ್ದಾರೆ.

ಧಾರವಾಡ, ನವೆಂಬರ್​​​​ 01: ಇಂದು ರಾಜ್ಯಾದ್ಯಂತ 68ನೇ ಅದ್ದೂರಿ ಕನ್ನಡರಾಜೋತ್ಸವ ಆಚರಿಸಲಾಗಿದೆ. ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಡಾ. ರಾಜ್​ಕುಮಾರ್​ ಚಿತ್ರದಲ್ಲಿ ಹಾಡಿಗೆ ನವಲಗುಂದ ಶಾಸಕ ಎನ್​ಹೆಚ್ ಕೋನರೆಡ್ಡಿ (NH Konaraddi) ಬಾವುಟ ಹಿಡಿದು ಸಖತ್​ ಡ್ಯಾನ್ಸ್ ಮಾಡಿದ್ದಾರೆ.  ಹಾಡಿಗೆ ತಕ್ಕಂತೆ ಶಾಸಕ ಎನ್​ಹೆಚ್ ಕೋನರೆಡ್ಡಿ ಕುಣಿದು ಕುಪ್ಪಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More