AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಉದ್ಯಾನವನ ಉದ್ಘಾಟನೆ, ಇಂದು 35 ಎಕರೆ ಭೂ ಕಬಳಿಕೆ ಆರೋಪ!

[lazy-load-videos-and-sticky-control id=”14guWol4dmU”] ಬೆಂಗಳೂರು:ನಗರದ ಮಲ್ಲಸಂದ್ರದಲ್ಲಿ ನಿರ್ಮಿಸಲಾಗಿರುವ ಕೆಂಪೇಗೌಡ ಉದ್ಯಾನವನ ನಾಳೆ ಉದ್ಘಾಟನೆಯಾಗಲಿದೆ. ಆದರೆ ಕೆಂಪೇಗೌಡ ಉದ್ಯಾನವನ ನಿರ್ಮಾಣದಲ್ಲಿ ಭಾರಿ ಹಗರಣ ನಡೆದಿದೆ ಎಂದು ದಾಸರಹಳ್ಳಿ ಜೆಡಿಎಸ್​ ಶಾಸಕ ಆರ್ ಮಂಜುನಾಥ್ ಆರೋಪ ಮಾಡಿದ್ದಾರೆ. ಮಾಜಿ ಬಿಜೆಪಿ ಶಾಸಕ ಎಸ್ ಮುನಿರಾಜು ಹಾಗೂ ಕಾರ್ಪೊರೇಟರ್ ಲೋಕೇಶ್, ದಾಸರಹಳ್ಳಿಯ ಬಿಬಿಎಂಪಿ ವಾರ್ಡ್ 13ರಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂಬುದು ಆರೋಪ. ಮಲ್ಲಸಂದ್ರ ವಾರ್ಡಿನ ಸರ್ವೆ ನಂಬರ್ 33ರಲ್ಲಿ ಪಾಲಿಕೆಗೆ ಹಸ್ತಾಂತರವಾಗದ ರೆವಿನ್ಯೂ ಜಮೀನಿನಲ್ಲಿ KRIDL ಯೋಜನೆ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. […]

ನಾಳೆ ಉದ್ಯಾನವನ ಉದ್ಘಾಟನೆ, ಇಂದು 35 ಎಕರೆ ಭೂ ಕಬಳಿಕೆ ಆರೋಪ!
ಸಾಧು ಶ್ರೀನಾಥ್​
|

Updated on:Aug 29, 2020 | 9:56 AM

Share

[lazy-load-videos-and-sticky-control id=”14guWol4dmU”]

ಬೆಂಗಳೂರು:ನಗರದ ಮಲ್ಲಸಂದ್ರದಲ್ಲಿ ನಿರ್ಮಿಸಲಾಗಿರುವ ಕೆಂಪೇಗೌಡ ಉದ್ಯಾನವನ ನಾಳೆ ಉದ್ಘಾಟನೆಯಾಗಲಿದೆ. ಆದರೆ ಕೆಂಪೇಗೌಡ ಉದ್ಯಾನವನ ನಿರ್ಮಾಣದಲ್ಲಿ ಭಾರಿ ಹಗರಣ ನಡೆದಿದೆ ಎಂದು ದಾಸರಹಳ್ಳಿ ಜೆಡಿಎಸ್​ ಶಾಸಕ ಆರ್ ಮಂಜುನಾಥ್ ಆರೋಪ ಮಾಡಿದ್ದಾರೆ.

ಮಾಜಿ ಬಿಜೆಪಿ ಶಾಸಕ ಎಸ್ ಮುನಿರಾಜು ಹಾಗೂ ಕಾರ್ಪೊರೇಟರ್ ಲೋಕೇಶ್, ದಾಸರಹಳ್ಳಿಯ ಬಿಬಿಎಂಪಿ ವಾರ್ಡ್ 13ರಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂಬುದು ಆರೋಪ. ಮಲ್ಲಸಂದ್ರ ವಾರ್ಡಿನ ಸರ್ವೆ ನಂಬರ್ 33ರಲ್ಲಿ ಪಾಲಿಕೆಗೆ ಹಸ್ತಾಂತರವಾಗದ ರೆವಿನ್ಯೂ ಜಮೀನಿನಲ್ಲಿ KRIDL ಯೋಜನೆ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ.

ಆದರೆ ಅಭಿವೃದ್ಧಿ ಕಾಮಗಾರಿಗೆ ಯಾವುದೇ ಟೆಂಡರ್ ಕರೆದಿಲ್ಲ. ಬದಲಿಗೆ ಆ ವಾರ್ಡಿನ ಕಾರ್ಪೊರೇಟರ್ ಆದ ಲೋಕೇಶ್ ಅವರು ಬೇನಾಮಿಯಾಗಿ ಟೆಂಡರ್ ಗುತ್ತಿಗೆಗೆ ಪಡೆದು ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಭಿವೃದ್ಧಿ ಕಾಮಗಾರಿಯಲ್ಲಿ ಪಾರ್ಕ್, ಆಡಿಟೋರಿಯಂ, ಸೇರಿದಂತೆ ವಿವಿಧ ಕಾಮಗಾರಿ ಹೆಸರಿನಲ್ಲಿ 23 ಕೋಟಿ 75 ಲಕ್ಷ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಜೆಡಿಎಸ್ ಶಾಸಕ ಆರ್ ಮಂಜುನಾಥ್ ಆರೋಪಿಸುತ್ತಿದ್ದಾರೆ.

ಮಲ್ಲಸಂದ್ರ ವಾರ್ಡಿನ ಸರ್ವೆ ನಂಬರ್ 33 ರಲ್ಲಿ ಒಟ್ಟಾರೆ 35 ಎಕರೆ ಜಮೀನನ್ನು ಭಾಗಶಃ ಒತ್ತುವರಿ ಮಾಡಿದ್ದು, ವೋಟಿಗಾಗಿ ಇದೇ ಸರ್ವೆ ನಂಬರಿನಲ್ಲಿ 7 ಎಕರೆ ಜಮೀನನ್ನು ಒತ್ತುವರಿ ಮಾಡಿ, ಪ್ರಭಾವಿಗಳಿಗೆ ಸಂಚಿಕೆ ಮಾಡಿದ್ದಾರೆ. ಬಿ. ಖರಾಬ್ ಬಂಡೆಗೆ ಬಿಬಿಎಂಪಿ ಕೋಟಿ ಕೋಟಿ ಹಣ ಸುರಿದಿದೆ ಎಂದು ಆರೋಪ ಮಾಡಿದ್ದಾರೆ.

ಈ ಮಧ್ಯೆ, ರೆವಿನ್ಯೂ ಜಾಗದಲ್ಲಿ ಕಟ್ಟಿರುವ ಮನೆಗಳನ್ನ ತೆರವುಗೊಳಿಸಿ ಬಿಬಿಎಂಪಿ‌ಗೆ ಜಾಗ ಹಸ್ತಾಂತರಿಸುವಂತೆ ರಾಜ್ಯ ಹೈಕೋರ್ಟ್ ಕಂದಾಯ ಇಲಾಖೆಗೆ ಅದೇಶ ನೀಡಿದೆ.

Published On - 5:57 pm, Fri, 28 August 20

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು