ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಕೆಂಡಾಮಂಡಲ
ಧಾರವಾಡದ ಹೊರವಲಯದಲ್ಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಅಕ್ರಮಗಳಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಹುಬ್ಬಳ್ಳಿ, ಫೆಬ್ರವರಿ 17: ಪೊಲೀಸರಿಗೆ ಉದ್ಯೋಗವೇ ಇಲ್ಲ, ವಾಹನಗಳನ್ನ ಹಿಡಿಯೋದು, ದುಡ್ಡು ವಸೂಲಿ ಮಾಡೋದು ಎಂದು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ವಾಗ್ದಾಳಿ ಮಾಡಿದ್ದಾರೆ. ಧಾರವಾಡ ಹೊರವಲಯದಲ್ಲಿ ಘಟನೆ ನಡೆದಿದ್ದು, ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನ ಲೂಟಿ ಮಾಡ್ತಿದ್ದಾರೆ. ಟಂಟಂಗೆ 5-10 ಸಾವಿರ ರೂ. ದಂಡ ಹಾಕುತ್ತೀರಿ ಎಂದು ಗರಂ ಆಗಿದ್ದಾರೆ. ದಾಖಲೆ ಪರಿಶೀಲಿಸಿ ಅಭ್ಯಂತರ ಇಲ್ಲ. ಆದರೆ ಎಲ್ಲ ದಾಖಲೆ ಇದ್ದರೂ ಒಂದು ಹಿಡುಕೊಂಡು ಕೂರ್ತಿರಿ. ಈ ಪೊಲೀಸರಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
