AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ ಕೆಂಡಾಮಂಡಲ

ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ ಕೆಂಡಾಮಂಡಲ

ಶಿವಕುಮಾರ್ ಪತ್ತಾರ್
| Edited By: |

Updated on: Feb 17, 2025 | 5:54 PM

Share

ಧಾರವಾಡದ ಹೊರವಲಯದಲ್ಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಅಕ್ರಮಗಳಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಹುಬ್ಬಳ್ಳಿ, ಫೆಬ್ರವರಿ 17: ಪೊಲೀಸರಿಗೆ ಉದ್ಯೋಗವೇ ಇಲ್ಲ, ವಾಹನಗಳನ್ನ ಹಿಡಿಯೋದು, ದುಡ್ಡು ವಸೂಲಿ ಮಾಡೋದು ಎಂದು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್​ ಕುಲಕರ್ಣಿ (Vinay Kulkarni) ವಾಗ್ದಾಳಿ ಮಾಡಿದ್ದಾರೆ. ಧಾರವಾಡ ಹೊರವಲಯದಲ್ಲಿ ಘಟನೆ ನಡೆದಿದ್ದು,  ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನ ಲೂಟಿ‌‌ ಮಾಡ್ತಿದ್ದಾರೆ. ಟಂಟಂಗೆ 5-10 ಸಾವಿರ ರೂ. ದಂಡ ಹಾಕುತ್ತೀರಿ ಎಂದು ಗರಂ ಆಗಿದ್ದಾರೆ. ದಾಖಲೆ ಪರಿಶೀಲಿಸಿ ಅಭ್ಯಂತರ ಇಲ್ಲ. ಆದರೆ ಎಲ್ಲ ದಾಖಲೆ ಇದ್ದರೂ ಒಂದು ಹಿಡುಕೊಂಡು ಕೂರ್ತಿರಿ. ಈ ಪೊಲೀಸರಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More