Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ಶಾಸಕರು ರಾಜಭವನ ತೆರಳಿ ಸರ್ಕಾರ ವಜಾಮಾಡುವಂತೆ ಮನವಿ ಸಲ್ಲಿಸಿದರು

Karnataka Budget Session: ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ಶಾಸಕರು ರಾಜಭವನ ತೆರಳಿ ಸರ್ಕಾರ ವಜಾಮಾಡುವಂತೆ ಮನವಿ ಸಲ್ಲಿಸಿದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 29, 2024 | 1:05 PM

Karnataka Budget Session: ಕೈಯಲ್ಲಿ ಪ್ಲಕಾರ್ಡ್ ಗಳನ್ನು ರಾಜಭವನಕ್ಕೆ ಬಂದ ಶಾಸಕರು ರಾಜಭವನದ ಮುಖ್ಯದ್ವಾರದ ಬಳಿ ನಿಂತು ಘೋಷಣೆ ಕೂಗಿದರು. ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ದೇಶದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ವಜಾ ಮಾಡಿ ವಜಾ ಮಾಡಿ ಕಾಂಗ್ರೆಸ್ ಸರ್ಕಾರವನ್ನು ವಜಾಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ ಎಂದು ಘೋಷಣೆಗಳನ್ನು ಕೂಗಿದರು.

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಾತಾಡುವಾಗ ಧಿಕ್ಕಾರ ಧಿಕ್ಕಾರ ಎನ್ನುತ್ತಾ ಸದನದಿಂದ ಹೊರಬಂದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರಾಜಭವನದ (Raj Bhavan) ಕಡೆ ಹೋದರು. ಕೈಯಲ್ಲಿ ಪ್ಲಕಾರ್ಡ್ ಗಳನ್ನು (placard) ರಾಜಭವನಕ್ಕೆ ಬಂದ ಶಾಸಕರು ರಾಜಭವನದ ಮುಖ್ಯದ್ವಾರದ ಬಳಿ ನಿಂತು ಘೋಷಣೆ ಕೂಗಿದರು. ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ದೇಶದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ವಜಾ ಮಾಡಿ ವಜಾ ಮಾಡಿ ಕಾಂಗ್ರೆಸ್ ಸರ್ಕಾರವನ್ನು ವಜಾಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ ಎಂದು ಘೋಷಣೆಗಳನ್ನು ಕೂಗಿದರು. ಆ ಸಮಯದಲ್ಲಿ ಒಂದು ಆಸಕ್ತಿಕರ ಸಂಗತಿ ಜರುಗುವುದನ್ನು ನೀವು ದೃಶ್ಯಗಳಲ್ಲಿ ಗಮನಿಸಬಹುದು. ಅಶೋಕ್ ನೇತೃತ್ವದಲ್ಲಿ ಶಾಸಕರು ಘೋಷಣೆ ಕೂಗುವಾಗ ಭೈರತಿ ಬಸವರಾಜ್ ಬಂದು ಅವರ ಪಕ್ಕದಲ್ಲಿ ನಿಂತುಕೊಳ್ಳುವ ಪ್ರಯತ್ನ ಮಾಡುತ್ತಾರೆ. ಕೂಡಲೇ ಆಶೋಕ ಬೇರೆ ಕಡೆ ಹೋಗಿ ನಿಲ್ಲುವಂತೆ ಹೇಳುತ್ತಾರೆ! ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಳಿಕ ಶಾಸಕರು ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ರಾಜಭವನದೊಳಗೆ ಹೋಗುತ್ತಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಶುಸಂಗೋಪನೆ ಇಲಾಖೆಯ ಜಮೀನು ಅಲ್ಪಸಂಖ್ಯಾತರ ಇಲಾಖೆಗೆ; ಸರ್ಕಾರದ ವಿರುದ್ಧ ಕಿಡಿಕಾರಿದ ಆರ್ ಅಶೋಕ