ಕೇವಲ 28 ದಿನದಲ್ಲಿ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ! ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

Edited By:

Updated on: Oct 17, 2025 | 7:49 AM

ಹಬ್ಬ ಹಾಗೂ ಸಾಲುಸಾಲು ರಜೆ ಹಿನ್ನೆಲೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ದೇಗುಲಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಇದರ ಪರಿಣಾಮ ಹುಂಡಿಗಳೆಲ್ಲ ಭರ್ತಿಯಾಗಿದ್ದು, ಗುರುವಾರ ಎಣಿಕೆ ಮಾಡಲಾಯಿತು. ಇದೇ ವೇಳೆ, ಮಾದಪ್ಪ ಕೇವಲ 28 ದಿನಗಳಲ್ಲಿ ಮತ್ತೆ ಕೋಟ್ಯಧಿಪತಿಯಾಗಿರುವುದು ಗೊತ್ತಾಗಿದೆ.

ಚಾಮರಾಜನಗರ, ಅಕ್ಟೋಬರ್ 17: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, 2.27 ಕೋಟಿ ರೂ.ಗೂ ಹೆಚ್ಚು‌ ಹಣ ಸಂಗ್ರಹವಾಗಿದೆ. ದಸರಾ, ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಹುಂಡಿ ಭರ್ತಿಯಾಗಿದ್ದು, ಎಣಿಕೆ ನಡೆಸಲಾಯಿತು. ಕೇವಲ 28 ದಿನಕ್ಕೆ ಈ ಮೊತ್ತ ಸಂಗ್ರಹವಾಗಿದೆ. ಗುರುವಾರ ಬೆಳಗ್ಗೆಯಿಂದ ತಡರಾತ್ರಿವರೆಗೂ ಹುಂಡಿ ಎಣಿಕೆ ಕಾರ್ಯ ನಡೆಯಿತು. ನಗದು ಮಾತ್ರವಲ್ಲದೆ 46 ಗ್ರಾಂ ಚಿನ್ನ, 1.350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಮಾದಪ್ಪನ ಹುಂಡಿಯಲ್ಲಿ 9 ವಿದೇಶಿ‌‌ ನೋಟುಗಳು ಹಾಗೂ ಚಲಾವಣೆ ಇಲ್ಲದ ಎರಡು‌ ಸಾವಿರ ಮುಖಬೆಲೆಯ 9 ನೋಟು ಸಿಕ್ಕಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published on: Oct 17, 2025 07:47 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More