AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಾಧಾನಕರ ಉತ್ತರ ಬಂದ್ರೆ ನಾನು ರವಿಚಂದ್ರನ್ ಹೇಳಿದಂತೆ ಕೇಳ್ತೀನಿ’; ಎಂಎನ್​ ಕುಮಾರ್

‘ಸಮಾಧಾನಕರ ಉತ್ತರ ಬಂದ್ರೆ ನಾನು ರವಿಚಂದ್ರನ್ ಹೇಳಿದಂತೆ ಕೇಳ್ತೀನಿ’; ಎಂಎನ್​ ಕುಮಾರ್

ರಾಜೇಶ್ ದುಗ್ಗುಮನೆ
|

Updated on: Jul 19, 2023 | 8:37 AM

Share

ಎಂಎನ್​ ಕುಮಾರ್ ಹಾಗೂ ಸುದೀಪ್ ನಡುವಿನ ಜಟಾಪಟಿ ಹೊಸ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ಈಗ ಈ ಪ್ರಕರಣದಲ್ಲಿ ರಾಜಿ ಮಾಡಿಸಲು ಶಿವರಾಜ್​ಕುಮಾರ್ ಹಾಗೂ ರವಿಚಂದ್ರನ್ ಅವರ ಎಂಟ್ರಿ ಆಗಿದೆ.

ಎಂಎನ್​ ಕುಮಾರ್ ಹಾಗೂ ಸುದೀಪ್ (Sudeep) ನಡುವಿನ ಜಟಾಪಟಿ ಹೊಸ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ಸುದೀಪ್ ಅವರು ಈ ಪ್ರಕರಣವನ್ನು ಕೋರ್ಟ್​ನಲ್ಲೇ ಬಗೆಹರಿಸಿಕೊಳ್ಳುತ್ತೇನೆ ಎನ್ನುತ್ತಿದ್ದಾರೆ. ಪ್ರಕರಣದ ಇತ್ಯರ್ಥ ಫಿಲ್ಮ್​ ಚೇಂಬರ್​ನಲ್ಲೇ ಆಗಬೇಕು ಎಂದು ಕುಮಾರ್ ಪಟ್ಟು ಹಿಡಿದಿದ್ದಾರೆ. ಈಗ ಈ ಪ್ರಕರಣದಲ್ಲಿ ರಾಜಿ ಮಾಡಿಸಲು ಶಿವರಾಜ್​ಕುಮಾರ್ (Shivarajkumar) ಹಾಗೂ ರವಿಚಂದ್ರನ್ ಅವರ ಎಂಟ್ರಿ ಆಗಿದೆ. ‘ರವಿಚಂದ್ರನ್ ಅವರನ್ನು ನಾನು ಭೇಟಿ ಮಾಡುತ್ತೇನೆ. ಸಮಾಧಾನಕರ ಉತ್ತರ ಬಂದ್ರೆ ನಾನು ರವಿಚಂದ್ರನ್ ಹೇಳಿದಂತೆ ಕೇಳ್ತೀನಿ’ ಎಂದು ಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More