Belagavi; ಅನ್ನಭಾಗ್ಯ ಯೋಜನೆ ಇವತ್ತಿನಿಂದ ಜಾರಿಯಾಗಿದೆ, ಕಾರ್ಡುದಾರರ ಖಾತೆಗೆ ಆಗಸ್ಟ್ 1 ರಿಂದ ಹಣ ಜಮಾ ಆಗುತ್ತದೆ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 01, 2023 | 4:18 PM

ಹಿಡ್ಕಲ್ ಡ್ಯಾಂನಲ್ಲಿ 2 ತಿಂಗಳಿಗೆ ಸಾಕಾಗುವಷ್ಟು ನೀರು ಇರೋದ್ರಿಂದ ಡ್ಯಾಂ ನೀರನ್ನು ಆಶ್ರಯಿಸಿಕೊಂಡವರು ಚಿಂತಿಸಬೇಕಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ: ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಇಂದು ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಬೆಳಗಾವಿ ಜಿಲ್ಲೆಯಲ್ಲಿ ಜನ ಕುಡಿಯುವ ನೀರಿಗಾಗಿ ಅತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು. ಹಿಡ್ಕಲ್ ಡ್ಯಾಂನಲ್ಲಿ (Hidkal Dam) 2 ತಿಂಗಳಿಗೆ ಸಾಕಾಗುವಷ್ಟು ನೀರು ಇರೋದ್ರಿಂದ ಡ್ಯಾಂ ನೀರನ್ನು ಆಶ್ರಯಿಸಿಕೊಂಡವರು ಚಿಂತಿಸಬೇಕಿಲ್ಲ ಮತ್ತು ಡ್ಯಾಂನೊಳಗೆ ಹೊಸ ನೀರಿ ಹರಿದು ಬರೋದು ಕೂಡ ಆರಂಭವಾಗಿದೆ ಎಂದರು. ಅನ್ನಭಾಗ್ಯ ಯೋಜನೆ (Anna Bhagya Scheme) ಬಗ್ಗೆ ಮಾತಾಡಿದ ಸಚಿವ, ಯೋಜನೆ ಈ ತಿಂಗಳು ಆರಂಭವಾಗಿದೆ ಮತ್ತು ಆಗಸ್ಟ್ 1 ರಿಂದ ಬಿಪಿಎಲ್ ಕಾರ್ಡುದಾರರ ಖಾತೆಗೆ ಹಣ ಜಮಾ ಆಗಲಿದೆ ಎಂದರು. ಈ ಮೊದಲು ಸಿಗುತ್ತಿದ್ದ 5 ಕೆಜಿ ಅಕ್ಕಿ ಯಥಾಪ್ರಕಾರ ಸಿಗಲಿದೆ ಅದಕ್ಕೇನೂ ಅಡಚಣೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.