ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ: ಗಂಡನ ಬಗ್ಗೆ ಶಾಕಿಂಗ್​​ ಹೇಳಿಕೆ ನೀಡಿದ ಮೋನಿಕಾ

Updated on: Dec 13, 2025 | 10:28 PM

ಪತಿ ಮಂಜುನಾಥ್‌ನಿಂದ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಆನ್‌ಲೈನ್ ಗ್ಯಾಂಬ್ಲಿಂಗ್ ಚಟದಿಂದ ತೊಂದರೆಗೊಳಗಾಗಿ, ಕಾನ್ಸ್ಟೆಬಲ್ ರಾಘವೇಂದ್ರ ನೆರವು ಪಡೆದಿರುವುದಾಗಿ ಮೋನಿಕಾ ಹೇಳಿದ್ದಾಳೆ. ಮಾಧ್ಯಮಗಳ ಮುಂದೆ ತನ್ನ ಕಷ್ಟಗಳನ್ನು ಹೇಳಿಕೊಂಡಿರುವ ಅವರು, ಪತಿಯು ತಂದೆ, ಅಣ್ಣನಿಗೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಿದ್ದಾಳೆ. ಇದೀಗ ಮಾಧ್ಯಮಗಳ ಮುಂದೆ ಬಂದು ಗಂಡ ವಿರುದ್ಧ ಹೇಳಿಕೆ ನೀಡಿದ್ದಾಳೆ.

ಬೆಂಗಳೂರು, ಡಿ.13: ಬೆಂಗಳೂರಿನಲ್ಲಿ ಕಾನ್ಸ್ಟೆಬಲ್ ಜತೆ ಪರಾರಿಯಾಗಿದ್ದ ಮೋನಿಕಾ ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾಳೆ. ತಮ್ಮ ಪತಿ ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. 13 ವರ್ಷಗಳ ಹಿಂದೆ ಮಂಜುನಾಥ್ ತನಗೆ ಕೊಲೆ ಬೆದರಿಕೆ ಹಾಕಿ, ಬಲವಂತವಾಗಿ ಮದುವೆಯಾಗಿದ್ದಾನೆ ಎಂದು ಮೋನಿಕಾ ಹೇಳಿದ್ದಾಳೆ. ಮದುವೆಯಾದಾಗಿನಿಂದಲೂ ದೌರ್ಜನ್ಯ ಎಸಗಿದ್ದಾನೆ ಹಾಗೂ ಆನ್‌ಲೈನ್ ಗ್ಯಾಂಬ್ಲಿಂಗ್‌ಗೆ ದಾಸನಾಗಿದ್ದಾನೆ ಎಂದು ಆರೋಪಿಸಿದ್ದಾಳೆ. ಮೋನಿಕಾ ಪ್ರಕಾರ, ಮಂಜುನಾಥ್ ತನಗೆ ಹಾಗೂ ಮಗುವಿಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಬಟ್ಟೆ, ಊಟಕ್ಕೂ ಸಹ ಅವರ ತಂದೆಯೇ ನೆರವು ನೀಡುತ್ತಿದ್ದರು. ತನ್ನ ಅಣ್ಣ ಸುನೀಲ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಈ ಎಲ್ಲ ಕಷ್ಟಗಳ ನಡುವೆ ಕಾನ್ಸ್ಟೆಬಲ್ ರಾಘವೇಂದ್ರ ತಮಗೆ ಮಾನಸಿಕ ಮತ್ತು ಆರ್ಥಿಕವಾಗಿ ಬೆಂಬಲ ನೀಡಿದ್ದಾರೆ, ಬಾಡಿಗೆ ಕಟ್ಟಿದ್ದಾರೆ ಎಂದು ಮೋನಿಕಾ ತಿಳಿಸಿದ್ದಾಳೆ. ಈ ಘಟನೆಯಲ್ಲಿ ರಾಘವೇಂದ್ರ ಅವರ ತಪ್ಪಿಲ್ಲ ಎಂದು ಮೋನಿಕಾ ಸಮರ್ಥಿಸಿಕೊಂಡಿದ್ದಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 13, 2025 10:26 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More