ವಿಡಿಯೋ: ಕಾವೇರಿ ಮೇಲೆ ವರುಣನ ಮುನಿಸು: ಜುಲೈ 5 ರೊಳಗೆ ಮಳೆ ಬಾರದಿದ್ರೆ ಅನ್ನದಾತ ಪರಿಸ್ಥಿತಿ ಶೋಚನೀಯ

KRS Water: ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ.

ವಿಡಿಯೋ: ಕಾವೇರಿ ಮೇಲೆ ವರುಣನ ಮುನಿಸು: ಜುಲೈ 5 ರೊಳಗೆ ಮಳೆ ಬಾರದಿದ್ರೆ ಅನ್ನದಾತ ಪರಿಸ್ಥಿತಿ ಶೋಚನೀಯ
| Updated By: ಸಾಧು ಶ್ರೀನಾಥ್​

Updated on: Jun 29, 2023 | 5:09 PM

ಅದ್ಯೊಕೊ ಕಾವೇರಿ ಜಲಾಯನ ಪ್ರದೇಶದ (KRS Water) ಮೇಲೆ ವರುಣ ದೇವ ಮುನಿಸಿಕೊಂಡಿದ್ದಾನೆ.. ಮುಂಗಾರು ಮಳೆ ಕೈ ಕೊಟ್ಟಿದ್ದು ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದ್ರೆ ಇತ್ತ ನಾಲೆಗಳಲ್ಲಿ ನೀರಿಲ್ಲದೆ ( irrigation) ರೈತರು ಬೆಳೆದ ಬೆಳೆಗೆ ನೀರು ಹರಿಸಲಾಗದೆ ಕಂಗಾಲಾಗಿದ್ದಾರೆ. ಸಕ್ಕರೆ ನಗರಿ ರೈತರ ಬವಣೆ ಯಾವ ರೀತಿಯಾಗಿದೆ ಅನ್ನೋದ್ರ ಒಂದು ರಿಪೋರ್ಟ್ ನಿಮ್ಮ ಮುಂದೆ. ಕಣ್ಣಾಡಿಸಿದ ಕಡೆಯಲ್ಲ ಬೆಳೆದು ನಿಂತ ಕಬ್ಬು.. ಮತ್ತೊಂದೆಡೆ ನೀರಿಲ್ಲದ ಬತ್ತಿರುವ ನಾಲೆಗಳು.. ಇತ್ತ ನೀರಿಲ್ಲದೆ ಒಣಗುತ್ತಿರುವ ಬೆಳೆದು ನಿಂತ ಕಬ್ಬಿನ ಬೆಳೆ.. ಏನನ್ನ ಮಾಡ್ಬೇಕೆಂದು ಕಂಗೆಟ್ಟಿರುವ ರೈತ.. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಕಿರುಗಾವಲಿನಲ್ಲಿ. ಹೌದು ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೆ ಸಕ್ಕರೆ ನಗರಿ ಮಂಡ್ಯದಲ್ಲಿ ಬರದ ಛಾಯೆ ಮೂಡಿದೆ.. ಇತ್ತ ಬಿತ್ತಲು ಆಗದೆ ಅತ್ತ ಬೆಳೆದು ನಿಂತ ಬೆಳೆಗಳಿಗು ನೀರು ಹರಿಸಲಾಗದೆ ಅನ್ನದಾತ ಪರದಾಟ (Mandya Farmer) ನಡೆಸುತ್ತಿದ್ದಾನೆ. ಜುಲೈ 5 ರೊಳಗೆ ಮಳೆ ಬಾರದೆ ಹೋದ್ರೆ ಅನ್ನದಾತ ಶೋಚನೀಯ ಪರಿಸ್ಥಿತಿಗೆ ಬಂದು ತಲುಪಲಿದ್ದಾನೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಆಗ್ತಾಯಿಲ್ಲ ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದೆ. 124 80 ಅಡಿ ಸಾಮಾರ್ಥ್ಯವುಳ್ಳ ಕೃಷ್ಣರಾಜಸಾಗರದ ಇಂದಿನ ನೀರಿನ ಮಟ್ಟ ಕೇವಲ 77 ಅಡಿಗೆ ಕುಸಿದಿದೆ. ಇನ್ನು 7 ಅಡಿ ನೀರು ತಗ್ಗಿದ್ರೆ ಉಳಿದ 70 ಅಡಿ ನೀರನ್ನ ಡೆಡ್ ಸ್ಟೋರೆಜ್ ಎಂದು ಘೋಶಿಸಲಾಗುತ್ತೆ. ರಾಜಧಾನಿ ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜನರಿಗೆ ಕುಡಿಯುವ ನೀರಿಗೂ ಆಹಾಕಾರ ಸೃಷ್ಠಿಯಾಗಲಿದೆ. ಜುಲೈ 5 ರ ಒಳಗೆ ನಿಗದಿತ ಪ್ರಮಾಣದ ಮಳೆ ಆಗದೆ ಹೋದ್ರೆ ಕುಡಿಯುವ ನೀರಿಗು ಸಮಸ್ಯೆ ಎದುರಾಗಲಿದೆ.

ಅದೇನೆ ಹೇಳಿ ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಇತ್ತ ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ. ಮಳೆಗಾಗಿ ರೈತರು ದೇವರ ಮೊರೆ ಹೋಗುವಂತಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿನ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​