ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಚಾಮರಾಜನಗರದ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಭಣಗುಡುತ್ತಿದೆ. ಜುಲೈ ತಿಂಗಳಲ್ಲಿ ಎಂದಿನಂತೆ ತುಂಬಿ ಹರಿಯಬೇಕಿದ್ದ ಜಲಪಾತ ಈಗ ಬರಿದಾಗಿದ್ದು, ಬಂಡೆಗಳು ಮಾತ್ರ ಕಾಣುತ್ತಿವೆ. ಮಳೆ ಕೊರತೆಯಿಂದ ಕಾವೇರಿ ಕೊಳ್ಳ ಬತ್ತಿ, ಕೆ.ಆರ್.ಎಸ್. ಡ್ಯಾಂನಲ್ಲಿ ನೀರಿಲ್ಲದೆ ಜಲಪಾತ ಜೀವಕಳೆ ಕಳೆದುಕೊಂಡಿರುವ ಕಾತಣ ಪ್ರವಾಸೊಗರ ಸಂಖ್ಯೆಯೂ ಭಾರೀ ಇಳಿಕೆ ಕಂಡಿದೆ.
ಚಾಮರಾಜನಗರ, ಜುಲೈ 26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಕಾರಣ, ಚಾಮರಾಜನಗರ ಜಿಲ್ಲೆಯ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಬಣಗುಡುತ್ತಿದೆ. ಕೊಳ್ಳೇಗಾಲ ತಾಲೂಕಿನಲ್ಲಿರುವ ಈ ಜಲಪಾತವು ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ಜಲಪಾತದ ಬಂಡೆಗಳು ಮಾತ್ರ ಕಾಣುತ್ತಿದೆ. ಮಳೆಗಾಲ ಆರಂಭವಾದರೂ ಕಾವೇರಿ ಕೊಳ್ಳ ಮತ್ತು ಹಳೆ ಮೈಸೂರು ಭಾಗದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಪರಿಣಾಮ ಕಾವೇರಿ ನದಿ ಹಾಗೂ ಕೆ.ಆರ್.ಎಸ್. ಡ್ಯಾಂ ಸಹ ಭರ್ತಿಯಾಗಿಲ್ಲ. ಇದರಿಂದ ಭರಚುಕ್ಕಿ ಜಲಪಾತಕ್ಕೆ ನೀರಿನ ಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮಳೆ ಕೊರತೆ ಭರಚುಕ್ಕಿಯ ಸೌಂದರ್ಯಕ್ಕೆ ಧಕ್ಕೆ ತಂದಿದ್ದು, ಪ್ರವಾಸೋದ್ಯಮಕ್ಕೂ ಹೊಡೆತ ನೀಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
