ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು
ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ
ಬೆಳಗಾವಿ, (ಜೂನ್ 09): ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.
ಇದನ್ನೂ ಓದಿ: Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್; ಎಲ್ಲೆಲ್ಲಿ ವರುಣಾರ್ಭಟ?
Follow Us

