ಮುಂಗಾರು ಮಳೆ ವಿಳಂಬ: ಮಳೆಗಾಗಿ ಶಾಸ್ತ್ರೋಕ್ತವಾಗಿ ಗೊಂಬೆ ವಿವಾಹ ಮಾಡಿದ ಜನ

Updated on: Jun 13, 2023 | 9:57 PM

ಮುಂಗಾರು ಮಳೆ ವಿಳಂಬ ಹಿನ್ನೆಲೆ ಮಳೆಗಾಗಿ ಗೊಂಬೆ ಮದುವೆ ಮಾಡಲಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಈ ವಿಶಿಷ್ಟ ಮದುವೆ ಕಂಡುಬಂದಿದೆ.

ಧಾರವಾಡ: ಕರಾವಳಿ ಜಿಲ್ಲೆಗಳಲ್ಲಿ ಮಳೆ (rains) ಅಬ್ಬರ ಜೋರಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಇಲ್ಲ. ಮುಂಗಾರು ಮಳೆ ಪ್ರಾರಂಭದಲ್ಲಿ ಕೈಕೊಟ್ಟಿದ್ದು, ರೈತರು ದೇವರ ಮೊರೆ ಹೋಗಿದ್ದಾರೆ. ಮುಂಗಾರು ಮಳೆ ವಿಳಂಬ ಹಿನ್ನೆಲೆ ಮಳೆಗಾಗಿ ಗೊಂಬೆ ಮದುವೆ ಮಾಡಲಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಈ ವಿಶಿಷ್ಟ ಮದುವೆ ಕಂಡುಬಂದಿದೆ. ಸವದತ್ತಿ ಯಲ್ಲಮ್ಮನ ಸನ್ನಿಧಿ ನೀರು ತಂದು ಪೂಜೆ ಮಾಡಿ, ಬಳಿಕ ಗ್ರಾಮದ ದೇವಸ್ಥಾನಗಳಿಗೆ ಪವಿತ್ರ ನೀರು ಸಿಂಪಡಣೆ ಮಾಡಿದ್ದಾರೆ. ಮದುವೆಯ ಎಲ್ಲ ಸಂಪ್ರದಾಯಗಳೊಂದಿಗೆ ಗ್ರಾಮಸ್ಥರು ಶಾಸ್ತ್ರೋಕ್ತವಾಗಿ ಗೊಂಬೆಗಳ ವಿವಾಹ ಮಾಡಿದ್ದಾರೆ,

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More