AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ

ಉಡುಪಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jun 26, 2024 | 4:30 PM

Share

ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಈ ಹಿನ್ನಲೆ ಕಾಪು, ಮಲ್ಪೆ, ಪಡುಕೆರೆ ಕಡಲ ಕಿನಾರೆ ಪ್ರಕ್ಷುಬ್ಧವಾಗಿದೆ. ಇನ್ನು ಮಲ್ಪೆ ಬೀಚ್​ನಲ್ಲಿಯೂ ರಕ್ಕಸ ಗಾತ್ರದ ಅಲೆಗಳು ಅಬ್ಬರಿಸುತ್ತಿರುವ ಹಿನ್ನಲೆ ಕಡಲಿನ ಹತ್ತಿರ ತೆರಳದಂತೆ ಬೀಚ್‌ ಸಿಬ್ಬಂದಿಗಳು ತಡೆಯುತ್ತಿದ್ದು, ಸಮುದ್ರದ ಕಡೆಗೆ ಪ್ರವೇಶಿಸದಂತೆ ಬೀಚ್‌ ಸಮಿತಿ ತಡೆಬೇಲಿ ನಿರ್ಮಿಸಿದ್ದಾರೆ.

ಉಡುಪಿ, ಜೂ.26: ಉಡುಪಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕಾಪು, ಮಲ್ಪೆ, ಪಡುಕೆರೆ ಕಡಲ ಕಿನಾರೆ ಪ್ರಕ್ಷುಬ್ಧವಾಗಿದೆ. ಇನ್ನು ಮಲ್ಪೆ ಬೀಚ್​ನಲ್ಲಿಯೂ ರಕ್ಕಸ ಗಾತ್ರದ ಅಲೆಗಳು ಅಬ್ಬರಿಸುತ್ತಿರುವ ಹಿನ್ನಲೆ ಕಡಲಿನ ಹತ್ತಿರ ತೆರಳದಂತೆ ಬೀಚ್‌ ಸಿಬ್ಬಂದಿಗಳು ತಡೆಯುತ್ತಿದ್ದು, ಸಮುದ್ರದ ಕಡೆಗೆ ಪ್ರವೇಶಿಸದಂತೆ ಬೀಚ್‌ ಸಮಿತಿ ತಡೆಬೇಲಿ ನಿರ್ಮಿಸಿದ್ದಾರೆ. ಬೀಚ್‌ ನೋಡಲು ಬಂದವರಿಗೆ ನೀರಿನತ್ತ ಹೋಗದಂತೆ ಸೂಚಿಸಿದ್ದು, ಇದರಿಂದ ಮಲ್ಪೆ ಬೀಚ್‌ಗೆ ಆಗಮಿಸಿದ ಪ್ರವಾಸಿಗರು ನಿರಾಸೆಯಿಂದ ವಾಪಸ್ಸು ಆಗುತ್ತಿದ್ದಾರೆ. ಇತ್ತ ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿಯೂ ಮಳೆ ಆರ್ಭಟ ಜೋರಾಗಿದ್ದು, ಭಾರೀ ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ. ಇದರಿಂದ ಕುದುರೆ ಮುಖ ಕಾರ್ಕಳ ರಸ್ತೆ ಸಂಪರ್ಕ ಬಂದ್ ಆಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More