ಹೊಸ ಮೆಟ್ರೋ ನಿಲ್ದಾಣಗಳಲ್ಲಿ ಪ್ರಶಸ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹೆಚ್ಚು ಸ್ಥಳ ಸ್ವಾಧೀನಪಡಿಸಿಕೊಳ್ಳಲಾಗುವುದು: ಶಿವಕುಮಾರ್
ಬೆಂಗಳೂರು ನಗರದ ಸೌಂದರ್ಯೀಕರಣಕ್ಕೆ ಬಿಬಿಎಂಪಿ ಜೊತೆ ಬಿಎಂಆರ್ಸಿಎಲ್ ಕೈಜೋಡಿಸಲಿದೆ ಎಂದು ಹೇಳಿದ ಶಿವಕುಮಾರ್, ಹೊಸ ಮೆಟ್ರೋ ಸ್ಟೇಷನ್ ಗಳನ್ನು ನಿರ್ಮಿಸುವಾಗ ಪ್ರಯಾಣಿಕರ ವಾಹನಗಳ ಪಾರ್ಕಿಂಗ್ ಗಾಗಿ ಹೆಚ್ಚುವರಿ ಸ್ಥಳವನ್ನು ಸ್ಥಾಧೀನಪಡಿಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಹೆಚ್ಚುತ್ತಿರುವ ಟ್ರಾಫಿಕ್ ಸಂಕಷ್ಟ ದೂರಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು: ಮೆಟ್ರೋ ಸೇವೆಯನ್ನು ವಿಸ್ತರಿಸಲು ಗೊರಗುಂಟೆ ಪಾಳ್ಯ, ಬಿಈಎಲ್ ರಸ್ತೆ, ಸುಮನಹಳ್ಳಿ ಜಂಕ್ಷನ್, ಲೊಟ್ಟೆಗೊಲ್ಲನಹಳ್ಳಿ, ನಾಯಂಡಹಳ್ಳಿ ಮೊದಲಾದ ಕಡೆ ಬಿಬಿಎಂಪಿ, ಬಿಡಿಎ, ಮತ್ತು ಬಿಎಂಅರ್ಸಿಎಲ್ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯೊಂದನ್ನು ನಡೆಸಿ ಹಲವಾರು ವಿಷಯಗಳ ಬಗ್ಗೆ ಮಾತಾಡಿದರು. ಈ ಭಾಗಗಳಲ್ಲಿ ಎಲ್ಲೆಲ್ಲಿ ಫ್ಲೈಓವರ್ ನಿರ್ಮಿಸಬೇಕು, ಟನೆಲ್ ಗಳನ್ನು ಎಲ್ಲಿ ಕೊರೆಸಬೇಕು ಸಬ್ವೇಗೆ ಎಲ್ಲಿ ಅವಕಾಶವಿದೆ, ಯಾವೆಲ್ಲ ಜಮೀನು ಮತ್ತು ಜಾಗಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು ಮೊದಲಾದ ಸಂಗತಿಗಳನ್ನು ಚರ್ಚಿಸಲಾಯಿತು ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟ ಸುದೀಪ್; ಕಾರಣ ಏನು?
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

