ಹಾಸನಾಂಬೆ ಉತ್ಸವ: ಭಕ್ತರು ಹುಂಡಿಗೆ ಹಾಕಿದ ಹಣ ಎಣಿಕೆ ಕಾರ್ಯಕ್ಕೆ 350 ಜನರ ನಿಯೋಜನೆ!

ಭಕ್ತರು ಹುಂಡಿಗಳಲ್ಲಿ ನಗದು ಅಲ್ಲದೆ, ಚಿನ್ನ, ಬೆಳ್ಳಿ ಆಭರಣಗಳನ್ನೂ ಹಾಕಿದ್ದು ಅವುಗಳನ್ನು ವಿಂಗಡಣೆ ಮಾಡುವ ಕೆಲಸದಲ್ಲಿ ಸಿಬ್ಬಂದಿ ನಿರತರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಹಣ ಎಣಿಕೆ ಕಾರ್ಯಕ್ಕೆ ಬ್ಯಾಂಕ್ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗಿದೆಯಂತೆ. ಟೇಬಲ್ ಗಳ ಮೇಲೆ ಹಣ ಎಣಿಸುವ ಯಂತ್ರಗಳನ್ನು ಇಟ್ಟಿರುವುದು ಕಾಣುತ್ತದೆ.

ಹಾಸನಾಂಬೆ ಉತ್ಸವ: ಭಕ್ತರು ಹುಂಡಿಗೆ ಹಾಕಿದ ಹಣ ಎಣಿಕೆ ಕಾರ್ಯಕ್ಕೆ 350 ಜನರ ನಿಯೋಜನೆ!
|

Updated on: Nov 16, 2023 | 1:08 PM

ಹಾಸನ: ಈ ವರ್ಷ 14 ದಿನಗಳ ಕಾಲ ನಡೆದ ಹಾಸನಾಂಬೆ ಉತ್ಸವ (Hasanambe Utsav) ಅಂತ್ಯಗೊಂಡಿದೆ, ಅರ್ಚಕರು (priests) ದೇಗುಲವನ್ನು ಮುಚ್ಚಿಬಿಟ್ಟಿದ್ದಾರೆ. ಇನ್ನು ಮುಂದಿನ ವರ್ಷವೇ ಹಾಸನಾಂಬ ದೇವಿಯ ದರ್ಶನ ಸಾಧ್ಯ. ಪ್ರತಿವರ್ಷದಂತೆ ಈ ವರ್ಷವೂ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ಉತ್ಸವದಲ್ಲಿ ಭಕ್ತರ ಕಾಣಿಕೆಗಳಿಗಾಗಿ ಇರಿಸಲಾಗಿದ್ದ ಹುಂಡಿಗಳನ್ನು ಇವತ್ತು ತೆರೆಯಲಾಗಿದ್ದು ಹಣ ಎಣಿಕೆ ಕಾರ್ಯ (counting of money) ಜಾರಿಯಲ್ಲಿದೆ. ಟಿವಿ9 ಕನ್ನಡ ವಾಹಿನಿಯ ಹಾಸನ ವರದಿಗಾರ ನೀಡಿರುವ ಮಾಹಿತಿ ಪ್ರಕಾರ 350 ಹೆಚ್ಚು ಜನರನ್ನು ಹಣ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಭಕ್ತರು ಹುಂಡಿಗಳಲ್ಲಿ ನಗದು ಅಲ್ಲದೆ, ಚಿನ್ನ, ಬೆಳ್ಳಿ ಆಭರಣಗಳನ್ನೂ ಹಾಕಿದ್ದು ಅವುಗಳನ್ನು ವಿಂಗಡಣೆ ಮಾಡುವ ಕೆಲಸದಲ್ಲಿ ಸಿಬ್ಬಂದಿ ನಿರತರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಹಣ ಎಣಿಕೆ ಕಾರ್ಯಕ್ಕೆ ಬ್ಯಾಂಕ್ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗಿದೆಯಂತೆ. ಟೇಬಲ್ ಗಳ ಮೇಲೆ ಹಣ ಎಣಿಸುವ ಯಂತ್ರಗಳನ್ನು ಇಟ್ಟಿರುವುದು ಕಾಣುತ್ತದೆ. ಮಧ್ಯಾಹ್ನದ ಹೊತ್ತಿಗೆ ಎಣಿಕೆ ಕಾರ್ಯ ಕೊನೆಗೊಳ್ಳಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ