7 ವರ್ಷದಲ್ಲಿ 40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ: ವಿಸಿ ನಾಲೆಗೆ ತಡೆಗೋಡೆ ಯಾವಾಗ?

Edited By:

Updated on: Nov 05, 2025 | 12:26 PM

ತಡೆಗೋಡೆ ಇಲ್ಲದ ಕಾರಣಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ನಾಲೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ್ಲ ತಡೆಗೋಡೆ ನಿರ್ಮಿಸುವ ಭರವಸೆ ನೀಡುತ್ತಾರೆ. ಆದರೆ, ಮತ್ತೆ ಆ ಬಗ್ಗೆ ಸುದ್ದಿಯೇ ಇರುವುದಿಲ್ಲ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

ಮಂಡ್ಯ, ನವೆಂಬರ್​ 05: ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ವಿಶ್ವೇಶ್ವರಯ್ಯ ನಾಲೆ ಮೃತ್ಯುಕೂಪವಾಗಿ ಮಾರ್ಪಟ್ಟಿದೆ. ತಡೆಗೋಡೆ ಇಲ್ಲದ ಕಾರಣಕ್ಕೆ 2018ರಿಂದ ಇಲ್ಲಿಯವರೆಗೆ 7 ವರ್ಷದ ಅವಧಿಯಲ್ಲಿ 40ಕ್ಕೂ ಹೆಚ್ಚುಮಂದಿ ವಿಸಿ ನಾಲೆಯಲ್ಲಿ ಜಲಸಮಾಧಿಯಾಗಿದ್ದಾರೆ. ಎರಡು ದಿನಗಳ ಹಿಂದೆಯೂ ಇದೇ ನಾಲೆಗೆ ಕಾರೊಂದು ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದ. ತಡೆಗೋಡೆ ಇಲ್ಲದಿರುವುದೇ ಸಾಲು ಸಾಲು ದುರಂತಗಳಿಗೆ ಕಾರಣವಾಗುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ್ಲ ತಡೆಗೋಡೆ ನಿರ್ಮಿಸುವ ಭರವಸೆ ನೀಡುತ್ತಾರೆ. ಆದರೆ, ಮತ್ತೆ ಆ ಬಗ್ಗೆ ಸುದ್ದಿಯೇ ಇರುವುದಿಲ್ಲ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 05, 2025 12:21 PM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More