AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KJ George: ಜನಕ್ಕೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲು ಅಣಿಯಾಗುತ್ತಿರುವುದು ಹೆಚ್ಚು ಸಂತಸ ನೀಡುತ್ತಿದೆ: ಕೆಜೆ ಜಾರ್ಜ್

KJ George: ಜನಕ್ಕೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲು ಅಣಿಯಾಗುತ್ತಿರುವುದು ಹೆಚ್ಚು ಸಂತಸ ನೀಡುತ್ತಿದೆ: ಕೆಜೆ ಜಾರ್ಜ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 20, 2023 | 5:00 PM

Share

ತಾನು ಯಾವುದೇ ಖಾತೆಯ ಆಕಾಂಕ್ಷಿಯಲ್ಲ, ಯಾವ ಖಾತೆ ನೀಡಿದರೂ ನಿಭಾಯಿಸುವುದಾಗಿ ಕೆಜೆ ಜಾರ್ಜ್ ಹೇಳಿದರು.

ಬೆಂಗಳೂರು: ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಖುಷಿಯಿಂದ ಬೀಗುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಕೆಜೆ ಜಾರ್ಜ್ (KJ George) ತಾನು ಯಾವುದೇ ಖಾತೆಯ ಆಕಾಂಕ್ಷಿಯಲ್ಲ, ಯಾವ ಖಾತೆ ನೀಡಿದರೂ ನಿಭಾಯಿಸುವುದಾಗಿ ಹೇಳಿದರು. ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಚುನಾವಣಾ ಸಮಯದಲ್ಲಿ ನೀಡಿದ ಗ್ಯಾರಂಟಿ ಮತ್ತು ಭರವಸೆಗಳನ್ನು (promises) ಈಡೇರಿಸಲು ಅಣಿಯಾಗುತ್ತಿರುವುದು ಸಚಿವ ಸ್ಥಾನ ಲಭ್ಯವಾಗಿದ್ದಕ್ಕಿಂತ ಹೆಚ್ಚು ಸಂತೋಷವಾಗಿದೆ ಎಂದು ಜಾರ್ಜ್ ಹೇಳಿದರು. ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿತ್ತು, ಈ ಬಾರಿ ಆಗಿನಕ್ಕಿಂತ ಹೆಚ್ಚು ಅಭಿವೃದ್ಧಿಯನ್ನು ನಿರೀಕ್ಷಿಸಬಹುದು ಎಂದು ಸಚಿವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.