ಅಂಕೋಲಾ ಬಳಿ ಅನಾಥವಾಗಿ ನಿಂತಿದ್ದ ಕಾರೊಂದರಲ್ಲಿ 1ಕೊಟಿ ರೂ. ಗೂ ಹೆಚ್ಚು ದಾಖಲೆಯಿಲ್ಲದ ಹಣ ಪತ್ತೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 29, 2025 | 2:34 PM

ಕಾರಿನ ಸೀಟಿನಡಿಯಲ್ಲಿ ಬಾಕ್ಸ್ ಇಡಲು ಸ್ಥಳ ಮಾಡಲಾಗಿದೆ ಮತ್ತು ಅಲ್ಲಿದ್ದ ಪೆಟ್ಟಿಗೆಯಲ್ಲೇ ಹಣ ಪತ್ತೆಯಾಗಿದೆ. ಭಾರೀ ಮೊತ್ತದ ಹಣವನ್ನು ನೋಡಿ ಪೊಲೀಸರು ಗಾಬರಿಗೊಳಗಾಗಿದ್ದು ಸುಳ್ಳಲ್ಲ. ಚುನಾವಣೆಯ ಸಮಯದಲ್ಲಿ ಹೀಗೆ ಕಾರುಗಳಲ್ಲಿ ಇಲ್ಲವೇ ಬೇರೆ ವಾಹನಗಳಲ್ಲಿ ದಾಖಲೆಯಿಲ್ಲದ ಹಣ ಸಾಗಿಸಲಾಗುತ್ತದೆ, ಅದರೆ ರಾಜ್ಯದಲ್ಲಿ ಈಗ ಯಾವುದೇ ಚುನಾವಣೆ ನಡೆಯುತ್ತಿಲ್ಲ.

ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲ್ಲೂಕಿನ ರಾಮಗುಳಿ ಗ್ರಾಮದ ಬಳಿ ನಿರ್ಜನ ಪ್ರದೇಶವೊಂದರಲ್ಲಿ ಅನಾಥವಾಗಿ ನಿಂತಿದ್ದ ಕಾರಲ್ಲಿ ದಾಖಲೆಯಿಲ್ಲದ ರೂ. 1.14 ಕೋಟಿ ಹಣ ಪತ್ತೆಯಾಗಿದೆ. ಹಣ ಯಾರಿಗೆ ಸೇರಿದ್ದು ಅಂತ ಗೊತ್ತಾಗಿಲ್ಲ ಆದರೆ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯ ಕಾರು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಅಂತ ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಯಾಕೆಂದರೆ ಕಾರಲ್ಲಿ ಹಲವಾರು ನಂಬರ್ ಪ್ಲೇಟ್ ಗಳು ಸಿಕ್ಕಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಾಯುಕ್ತ ಬಲೆಗೆ ಮತ್ತೊಬ್ಬ ಪಾಲಿಕೆ ಅಧಿಕಾರಿ, ಕಾರಿಂದ ದಾಖಲೆಯಿಲ್ಲದ ಹಣ ಬರಾಮತ್ತು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.