Malaprabha River: ಮಲಪ್ರಭಾ ನದಿಯ ಆರ್ಭಟ; ಕುಸಿದ ಸೇತುವೆ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ಪರಿಣಾಮ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಕ್ಕದಲ್ಲಿ ಮಣ್ಣು ಕುಸಿದಿದೆ.
ಬೆಳಗಾವಿ, ಜು.23: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ಪರಿಣಾಮ ಮಲಪ್ರಭಾ ನದಿ(Malaprabha River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೌದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಕ್ಕದಲ್ಲಿ ಮಣ್ಣು ಕುಸಿದಿರುವ ಘಟನೆ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದ ಬಳಿ ನಡೆದಿದೆ. ಬೆಳಗಾವಿಯಿಂದ ಹಿರೇಮುನವಳ್ಳಿ, ಅವರೊಳ್ಳಿ ಸೇರಿದಂತೆ 30 ಗ್ರಾಮಗಳಿಗೆ ಸಂಪರ್ಕಿಸುವ ಪಾರಿಶ್ವಾಡ ಗ್ರಾಮದ ಸೇತುವೆ ಇದಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕೊಚ್ಚಿ ಹೋಗುವ ಭೀತಿ ಎದುರಾಗಿದೆ. ಆದರೂ ವಾಹನಗಳು ಸೇತುವೆ ಮೇಲೆ ಸಂಚರಿಸುತ್ತಿವೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:08 pm, Sun, 23 July 23