ಮಗನ ಆರತಕ್ಷತೆ ಕಾರ್ಯಕ್ರಮದಲ್ಲಿ ವಜ್ರಾಭರಣ ತೊಟ್ಟು ತಾಯಿ ನೀತಾ ಅಂಬಾನಿ ಮಿಂಚಿಂಗ್

Updated on: Jul 14, 2024 | 10:48 PM

ಏಷ್ಯಾದ ಸಿರಿವಂತ ಕುಬೇರ ಮುಖೇಶ್ ಅಂಬಾನಿ ಪುತ್ರನ ಅದ್ದೂರಿ ಕಲ್ಯಾಣೋತ್ಸವ ನಡೆಯುತ್ತಿದೆ. ಇದಕ್ಕಾಗಿ ಮುಂಬೈನಲ್ಲಿ ಸ್ವರ್ಗವೇ ನಾಚುವಂತೆ ಅಲಂಕಾರ ಮಾಡಲಾಗಿದೆ. ಇಂದು ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದ್ದು, ನೀತಾ ಅಂಬಾನಿ ಅವರು ಗುಲಾಬಿ ಬಣ್ಣದ ಕಸೂತಿ ಸೀರೆ ಮತ್ತು ವಜ್ರಾಭರಣಗಳನ್ನು ತೊಟ್ಟು ಮಿಂಚಿದಿದ್ದಾರೆ.

ಮುಂಬೈ, ಜುಲೈ 14: ಏಷ್ಯಾದ ಸಿರಿವಂತ ಮುಖೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಸ್ವರ್ಗವನ್ನೇ ಧರೆಗಿಳಿಸಿದ್ದಾರೆ. ಸಿರಿವಂತಿಕೆಯ ಸೊಬಗಿನಲ್ಲಿ ಅನಂತ್​ ಅಂಬಾನಿ, ರಾಧಿಕಾ ಮರ್ಚೆಂಟ್​ ಅದ್ಧೂರಿ ಕಲ್ಯಾಣ ಜರುಗಿದೆ. ಇಂದು ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದೆ. ಈ ವೇಳೆ ಅನಂತ್​ ಅಂಬಾನಿ ತಾಯಿ ನೀತಾ ಅಂಬಾನಿ (Nita Ambani) ಅವರು ಗುಲಾಬಿ ಬಣ್ಣದ ಕಸೂತಿ ಸೀರೆ ಮತ್ತು ವಜ್ರಾಭರಣಗಳನ್ನು ತೊಟ್ಟು ಮಿಂಚಿದಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಇಂದಿನ ಆರತಕ್ಷತೆ ಕಾರ್ಯಕ್ರಮಕ್ಕೂ ಗಣ್ಯಾತಿಗಣ್ಯರು ಆಗಮಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More