ಮಗನನ್ನು ಮದುಮಗನಾಗಿ ನೋಡುವ ತವಕದಲ್ಲಿದ್ದ ತಾಯಿಗೆ ದಿವಿನ್ ಸಿಕ್ಕಿದ್ದು ಶವವಾಗಿ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 01, 2025 | 7:35 PM

ಫೆಬ್ರುವರಿ 22 ರಂದು ದಿವಿನ್ ಮದುವೆಯಾಗುವವರಿದ್ದರು ಮತ್ತು ಅದೇ ತಿಂಗಳು 15 ರಿಂದ ರಜೆ ಪಡೆದು ಊರಿಗೆ ಬರುವವರಿದ್ದರು. ಅದರೆ ಶವವಾಗಿ ಬರುತ್ತಾನೆ ಅಂತ ತಾನೆಣಿಸಿರಲಿಲ್ಲ ಎಂದು ತಾಯಿ ರೋದಿಸುತ್ತಾರೆ. 23 ಡಿಸೆಂಬರ್, ಮಂಗಳವಾರದಂದು ಅವರು ಕೊನೆಯ ಬಾರಿಗೆ ತಮ್ಮ ಮಗನೊಂದಿಗೆ ಮಾತಾಡಿದ್ದರಂತೆ. ಅವರ ಪತಿ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದಾರೆ ಮತ್ತು ಈಗ ಇದ್ದೊಬ್ಬ ಮಗ ಹುತಾತ್ಮ.

ಮಡಿಕೇರಿ: ಡಿಸೆಂಬರ್ 29ರಂದು ಕಾಶ್ಮೀರದ ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯೋಧ ದಿವಿನ್ ಅವರ ಅಮ್ಮನಿಗೆ ಅತ್ತು ಅತ್ತು ಕಣ್ಣೀರು ಬತ್ತಿ ಹೋಗಿದೆ. ಇದ್ದೊಬ್ಬ ಮಗನನ್ನು ಕಳೆದುಕೊಂಡು ಅವರು ಅಕ್ಷರಶಃ ಕಂಗಾಲಾಗಿದ್ದಾರೆ. ಡಿಸೆಂಬರ್ 24ರಂದು ಜಮ್ಮುವಿನ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ ಅಪಘಾತಕ್ಕೀಡಾದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಸೋಮವಾರಪೇಟೆ ತಾಲ್ಲೂಕಿನ ಮಾಲಂಬಿ ಗ್ರಾಮದ ದಿವಿನ್ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು. ಅವರ ಹುಟ್ಟೂರಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.