ಯುಎಸ್ ನಲ್ಲಿ ದಾವಣಗೆರೆಯ ಟೆಕ್ಕಿ ಕುಟುಂಬ ಸಾವು, ಸಿದ್ದರಾಮಯ್ಯರನ್ನು ಭೇಟಿಯಾಗಿ ಪಾರ್ಥಿವ ಶರೀರಗಳನ್ನು ತರಿಸಲು ನೆರವಾಗುವಂತೆ ಕೋರಿದ ಟೆಕ್ಕಿ ತಾಯಿ
ಮೂವರ ದೇಹಗಳು ಅಮೆರಿಕಾದಲ್ಲೇ ಇದ್ದು ಭಾರತಕ್ಕೆ ಯಾವಾಗ ರವಾನಿಸಲಾಗುತ್ತದೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಏತನ್ಮಧ್ಯೆ, ಯೋಗೇಶ್ ತಾಯಿ ಶೋಭಾ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಇಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ವೇದನೆ ಹೇಳಿಕೊಂಡರು.
ಬೆಂಗಳೂರು: ದೂರದ ಯುಎಸ್ನ ಬಾಲ್ಟಿಮೋರ್ ನಲ್ಲಿ ದಾವಣಗೆರೆ ಮೂಲದ ಸಾಫ್ಟ್ ವೇರ್ ಇಂಜಿನೀಯರ್ ಯೋಗೇಶ್ (Yogesh) (37), 35-ವರ್ಷದವರಾಗಿದ್ದ ಅವರ ಪತ್ನಿ ಪ್ರತಿಭಾ (Pratibha) ಹಾಗೂ ಅವರ ಪುಟ್ಟ ಮಗು ಯಶ್ (Yash) ನಿಗೂಢವಾಗಿ ಸಾವನ್ನಪ್ಪಿರುವುದು ನಿನ್ನೆ ವರದಿಯಾಗಿದೆ. ಮೂವರ ದೇಹಗಳು ಅಮೆರಿಕಾದಲ್ಲೇ ಇದ್ದು ಭಾರತಕ್ಕೆ ಯಾವಾಗ ರವಾನಿಸಲಾಗುತ್ತದೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಏತನ್ಮಧ್ಯೆ, ಯೋಗೇಶ್ ತಾಯಿ ಶೋಭಾ (Shobha) ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಇಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ತಮ್ಮ ವೇದನೆ ಹೇಳಿಕೊಂಡರು. ಮಗ, ಸೊಸೆ ಮತ್ತು ಮೊಮ್ಮಗನ ಪಾರ್ಥೀವ ಶರೀರ ಆದಷ್ಟು ಬೇಗ ಸ್ವದೇಶಕ್ಕೆ ತರಿಸುವ ವ್ಯವಸ್ಥೆ ಮಾಡಬೇಕೆಂದು ಶೋಭಾ ಮುಖ್ಯಮಂತ್ರಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. ಅವರ ಮನವಿಗೆ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ತಕ್ಕ ಏರ್ಪಾಟುಗಳನ್ನು ಮಾಡುವ ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

