ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ

Updated on: Feb 07, 2026 | 2:56 PM

ಕಲರ್ಸ್ ಕನ್ನಡದಲ್ಲಿ ‘ರಾಮಾಚಾರಿ’ ಧಾರಾವಾಹಿ ಹಲವು ವರ್ಷಗಳಿಂದ ಪ್ರಸಾರ ಕಾನುತ್ತಲೇ ಇತ್ತು. ಆದರೆ, ಈ ಧಾರಾವಾಹಿ ಇತ್ತೀಚೆಗೆ ಕೊನೆಗೊಂಡಿದೆ. ಈಗ ಕೃಷ್ಣ ರುಕ್ಕು ಧಾರಾವಾಹಿ ಮೂಲಕ ‘ರಾಮಾಚಾರಿ’ಯ ಮೌನ ಗುಡ್ಡೇಮನೆ ಎಂಟ್ರಿ ಕೊಡುತ್ತಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More