ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ, ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ
ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಅಲ್ಲಲ್ಲಿ ಸಂಭವಿಸುತ್ತಿರುವ ಭೂಕುಸಿತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸೋಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ. ವಾಹನ ಯಾವುದಾದರೇನು ಭೂಕುಸಿತ ಉಂಟಾಗುತ್ತಿದ್ದರೆ ವಾಹನಗಳು ಓಡಾಡುವುದು ಅಪಾಯಕಾರಿಯೇ. ವಾಹನ ಸವಾರರು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು.
ಚಿಕ್ಕಮಗಳೂರು, ಜೂನ್ 17: ರಾಜ್ಯದಾದ್ಯಂತ ಮಳೆ ತನ್ನ ಪ್ರವರ ಮುಂದುವರಿಸಿದೆ. ಪಶ್ಚಿಮಘಟ್ಟ ಸಾಲು (Western Ghats Section), ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆ ಒಂದೇಸಮ ಸುರಿಯುತ್ತಿದೆ. ಚಿಕ್ಕಮಗಳೂರುನಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿರುವ ಸಾಲ್ಮರ ಗ್ರಾಮದ ಮೂಲಕ ಹಾದುಹೋಗುವ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ ಉಂಟಾಗಿದೆ. ದೃಶ್ಯಗಳಲ್ಲಿ ಮನೆಯೊಂದು ಭೂಕುಸಿತದಿಂದ ಅಪಾರ ಹಾನಿಗೊಳಗಾಗಿರುವುದನ್ನು ನೋಡಬಹುದು. ಯಾವುದೇ ಸಾವು ನೋವು ಸಂಭವಿಸದಿರುವುದು ಅದೃಷ್ಟ. ಕೆಲ ಅಧಿಕಾರಿಗಳು ಹಾನಿಗೊಳಗಾಗಿರುವ ಮನೆ ವೀಕ್ಷಿಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಮಂಗಳೂರು ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

