ಶಿಗ್ಗಾವಿ ಉಪ ಚುನಾವಣೆ: ಯಡಿಯೂರಪ್ಪರನ್ನು ಭೇಟಿಯಾದ ಸಂಸದ ಬೊಮ್ಮಾಯಿ

|

Updated on: Oct 17, 2024 | 12:10 PM

ಶಿಗ್ಗಾವಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ನಂತರ ಹಾವೇರಿಯಿಂದ ಸಂಸದರಾಗಿ ಅಯ್ಕೆಯಾದ ಕಾರಣಾ ಶಿಗ್ಗಾವಿನಲ್ಲಿ ಉಪ ಚುನಾವಣೆ ನಡೆಯಲಿದೆ. ಇವತ್ತು ಅವರು ಯಡಿಯೂರಪ್ಪರನ್ನು ಭೇಟಿಯಾದಾಗ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಜೊತೆಗಿದ್ದರು.

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 13ರಂದು ಮತದಾನ ನಡೆಯಲಿದ್ದು ರಾಜ್ಯದ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸುವಲ್ಲಿ ಮಗ್ನವಾಗಿವೆ. ಇದೇ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರನ್ನು ಅವರ ಬೆಂಗಳೂರು ನಿವಾಸದಲ್ಲಿ ಭೇಟಿಯಾಗಿ ಚುನಾವಣೆಗೆ ಸಂಬಂಧಿಸಿದ ಮಾತುಕತೆ ನಡೆಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಉಪ ಚುನಾವಣೆ ಹಿನ್ನಲೆ: ಸಂಡೂರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ..!

Follow us on