Ramanagara: ದಿಶಾ ಸಭೆಯಲ್ಲಿ ನಗರಸಭೆ ಆಯುಕ್ತರನ್ನು ನೀವು ಕ್ಲರ್ಕಾ, ಪಿಯೋನ್ನಾ ಅಂತ ಕೇಳಿದ ಸಂಸದ ಡಿಕೆ ಸುರೇಶ್!

ಅರುಣ್​ ಕುಮಾರ್​ ಬೆಳ್ಳಿ

Updated on: Jun 17, 2023 | 6:30 PM

ಕಚೇರಿಯಲ್ಲಿ ಯಾವ ರೀತಿ ಕೆಲಸ ಮಾಡುತ್ತೀರಿ ಅನ್ನೋದು ನಿಮ್ ಮುಖ ನೋಡಿದ್ರೆ ಗೊತ್ತಾಗುತ್ತದೆ ಎಂದು ಸುರೇಶ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ.

ರಾಮನಗರ: ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಡಿಕೆ ಸುರೇಶ್ (DK Suresh) ಇಂದು ದಿಶಾ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ರಾಮನಗರ ನಗರಸಭೆ ಆಯಕ್ತ (corporation commissioner) ನಾಗೇಶ್ ಯಾವುದೇ ಪೂರ್ವ ಸಿದ್ಧತೆಯಿಲ್ಲದೆ (unprepared) ಸಭೆಯಲ್ಲಿ ಭಾಗವಹಿಸಿದ್ದಕ್ಕೆ ತೀವ್ರ ಮುಖಭಂಗ ಅನುಭವಿಸಬೇಕಾಯಿತು. ಕಾಮಗಾರಿಗಳ ಬಗ್ಗೆ ಸಂಸದ ವಿವರಣೆ ಕೇಳಿದಾಗ ನಾಗೇಶ್ ತಡವರಿಸಿದರು. ಅಸಲಿಗೆ ಅವರಲ್ಲಿ ಸರಿಯಾದ ಮಾಹಿತಿಯೇ ಇರಲಿಲ್ಲ. ಆಗಲೇ ಅವರು ನಾಗೇಶ್ ಗೆ ನೀವು ಕಚೇರಿಯಲ್ಲಿ ಕ್ಲರ್ಕಾ ಆಥವಾ ಪಿಯೋನ್ನಾಅಂತ ಕೇಳುತ್ತಾರೆ. ನಾಗೇಶ್ ಅಲ್ಲ ಸಾರ್ ಕಮೀಶನರ್ ಅಂದಾಗ; ಸುರೇಶ್, ಕಮೀಶನರ್ ಕಾಣೋದೇ ಇಲ್ವಲ್ಲಾ ಅನ್ನುತ್ತಾರೆ. ಕಚೇರಿಯಲ್ಲಿ ಯಾವ ರೀತಿ ಕೆಲಸ ಮಾಡುತ್ತೀರಿ ಅನ್ನೋದು ನಿಮ್ ಮುಖ ನೋಡಿದ್ರೆ ಗೊತ್ತಾಗುತ್ತದೆ ಎಂದು ಸುರೇಶ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.