ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂರೋವರೆಗೆ ಸಂಸದ ಪ್ರಜ್ವಲ್ ರೇವಣ್ಣ ನಿಂತೇ ಇದ್ದರು!

ಕಳೆದ ತಿಂಗಳು ಮೈಸೂರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ ಅಲ್ಲಿನ ಸಂಸದ ಪ್ರತಾಪ್ ಸಿಂಹ ವೇದಿಕೆಯ ಮೇಲೆ ಮೈಮುದುರಿಕೊಂಡು ಸಂಕೋಚದ ಮುದ್ದೆಯಾಗಿ ಕೂತಿದ್ದರು! ಇವತ್ತು ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ, ಸಂಸದ ಪ್ರಜ್ವಲ್ ರೇವಣ್ಣ ವರ್ತನೆ ಭಿನ್ನವಾಗೇನೂ ಇರಲಿಲ್ಲ

ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂರೋವರೆಗೆ ಸಂಸದ ಪ್ರಜ್ವಲ್ ರೇವಣ್ಣ ನಿಂತೇ ಇದ್ದರು!
|

Updated on: Nov 07, 2023 | 6:23 PM

ಹಾಸನ: ರಾಜ್ಯದ ಈಗಿನ ಕಾಂಗ್ರೆಸ್ಸೇತರ ಪಕ್ಷಗಳ ಯುವ ನಾಯಕರನ್ನು ನೀವು ಗಮನಿಸಿ. ಮಾಧ್ಯಮಗಳ ಮುಂದೆ, ರಾಜಕೀಯ ಕಾರ್ಯಕ್ರಮಗಳ ವೇದಿಕೆ ಮತ್ತು ಇನ್ನೂ ಬೇರೆ ಕಡೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ತೀವ್ರವಾಗಿ ಟೀಕಿಸುತ್ತಾರೆ ಅದರೆ ಅವರು ಎದುರು ಬಂದಾಗ ವಿಧೇಯ ವಿದ್ಯಾರ್ಥಿಗಳ (obedient students) ಹಾಗೆ ಕೈಕಟ್ಟಿ ನಿಲ್ಲುತ್ತಾರೆ. ಕಳೆದ ತಿಂಗಳು ಮೈಸೂರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ ಅಲ್ಲಿನ ಸಂಸದ ಪ್ರತಾಪ್ ಸಿಂಹ ವೇದಿಕೆಯ ಮೇಲೆ ಮೈಮುದುರಿಕೊಂಡು ಸಂಕೋಚದ ಮುದ್ದೆಯಾಗಿ ಕೂತಿದ್ದರು! ಇವತ್ತು ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna, MP) ವರ್ತನೆ ಭಿನ್ನವಾಗೇನೂ ಇರಲಿಲ್ಲ. ವೇದಿಕೆ ಮೇಲೆ ಸಿದ್ದರಾಮಯ್ಯರನ್ನು ಶಾಲು ಹೊದಿಸಿ ಮತ್ತು ಹಾರ ಹಾಕಿ ಸನ್ಮಾನ ಮಾಡುವ ಸಂಸದರು ಕೈಕಟ್ಟಿಕೊಂಡು ಯೋಗಕ್ಷೇಮ ವಿಚಾರಿಸುತ್ತಾರೆ. ಬಳಿಕ ಸಿದ್ದರಾಮಯ್ಯ ಕೂತ್ಕೊಳ್ಳಿ ಅಂತ ಹೇಳಿದಾಗ ಕುರ್ಚಿಯ ಮೇಲೆ ಕೂರಲು ಅಣಿಯಾಗುವ ಪ್ರಜ್ವಲ್, ಸಿದ್ದರಾಮಯ್ಯ ತಮ್ಮ ಎಡಪಕ್ಕದಲ್ಲಿದ್ದ ವ್ಯಕ್ತಿಯ ಜೊತೆ ಇನ್ನೂ ಮಾತಾಡುತ್ತಾ ನಿಂತಿರುವುದನ್ನು ನೋಡಿ ಇನ್ನೇನು ಕೂರಬೇಕು ಅನ್ನುವಾಗ ಥಟ್ಟನೆ ನಿಂತುಬಿಡುತ್ತಾರೆ. ಸಿದ್ದರಾಮಯ್ಯ ಅವರು ಕುರ್ಚಿಯಲ್ಲಿ ಕುಳಿತ ನಂತರವೇ ಪ್ರಜ್ವಲ್ ಆಸೀನರಾಗುತ್ತಾರೆ. ನಿಜಕ್ಕೂ ಸಂಸ್ಕಾರವಂತ ಸಂಸದ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ